Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆರೆಯವರಿಗೆ 'ಹೊರೆ'ಯಾದ ಚಿತ್ರನಟಿ ರಂಜಿತಾ
ಸ್ವಾಮಿ ನಿತ್ಯಾನಂದ ಪ್ರಕರಣದಿಂದ ದಿಢೀರನೆ ಹೆಸರು ಮಾಡಿದ ನಟಿ ರಂಜಿತಾಗೆ ನೆರೆಹೊರೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚೆನ್ನೈನ ಆಕೆಯ ಮನೆಯ ಅಕ್ಕಪಕ್ಕ ಇರುವವರು ಕೂಡಲೆ ಮನೆ ಖಾಲಿ ಮಾಡುವಂತೆ ಆಕೆಗೆ ಒತ್ತಾಯ ಹೇರುತ್ತಿದ್ದಾರೆ.
ಪ್ರಸ್ತುತ ರಂಜಿತಾ ಚೆನ್ನೈನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಟಿ ನಗರದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿನ ನಿವಾಸಿಗಳಿಗೆ ರಂಜಿತಾ ಅಲ್ಲಿರುವುದು ಇಷ್ಟವಿಲ್ಲ. ಹಾಗಾಗಿ ಎಲ್ಲರೂ ಒಟ್ಟಿಗೆ ಆಕೆಯನ್ನು ಮನೆ ಖಾಲಿ ಮಾಡುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ. ತಮ್ಮ ಮಕ್ಕಳು ಎಲ್ಲಿ ಹಾದಿ ತಪ್ಪುತ್ತಾರೋ ಎಂಬ ಭಯ ಅಲ್ಲಿನ ನಿವಾಸಿಗಳಿಗೆ ಕಾಡುತ್ತಿದೆಯಂತೆ.
ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣ ಬಯಲಾಗುತ್ತಿದ್ದಂತೆ ನಟಿ ರಂಜಿತಾ ನಾಪತ್ತೆಯಾಗಿದ್ದರು. ಆಗ ಅವರು ಇದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈಗ ಪ್ರಕರಣ ತಣ್ಣಗಾದ ಬಳಿಕ ಪುನಃ ಅವರು ಟಿ ನಗರಕ್ಕೆ ಹಿಂತಿರುಗಿದ್ದು ಇಲ್ಲೇ ವಾಸಿಸುತ್ತಿದ್ದಾರೆ. ಆದರೆ ಇಲ್ಲಿನ ನಿವಾಸಿಗಳಿಗೆ ಆಕೆ ಅಲ್ಲಿರುವುದು ಸುತಾರಾಂ ಇಷ್ಟವಿಲ್ಲವಂತೆ. [ಸ್ವಾಮಿ ನಿತ್ಯಾನಂದ]