Don't Miss!
- News 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮರಾಜ್ಯ ನಿರ್ಮಾಣ: ಡಾ. ಕೆ. ಸುಧಾಕರ್
- Lifestyle ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣಿಪಾಲಕ್ಕೆ ಪಾದ ಬೆಳೆಸಿದ ಪುನೀತ್ ' ಪರಮಾತ್ಮ'
ಸಕಲೇಶಪುರದಲಿ ಸದ್ದಿಲ್ಲದಂತೆ ಸೆಟ್ಟೇರಿದ ಪರಮಾತ್ಮ ಚಿತ್ರ ಈಗ ಮಣಿಪಾಲಕ್ಕೆ ಸ್ಥಳಾಂತರವಾಗಿದೆ. ಸಕಲೇಶಪುರದಲ್ಲಿ ಎರಡು ದಿನಗಳ ಕಾಲ ಚಿತ್ರೀಕರಣ ಮುಗಿಸಿಕೊಂಡು ಪುನೀತ್ ರಾಜ್ ಕುಮಾರ್ ಅವರು ಅಲ್ಲು ಅರ್ಜುನ್ ಮದುವೆಗೆ ಹೈದರಾಬಾದ್ಗೆ ಹಾರಿದ್ದರು. ಮಾರ್ಚ್ 6ರಂದು ಅಲ್ಲು ಅರ್ಜುನ್ ಮದುವೆ ನೆರವೇರಿದೆ.
ಬಳಿಕ ಅವರು ಅಲ್ಲಿಂದ ನೇರವಾಗಿ ಮಣಿಪಾಲ ತಲುಪಿದ್ದಾರೆ. ಚಿತ್ರದ ನಾಯಕಿ ದೀಪಾ ಸನ್ನಿದ್ಧಿ ಹಾಗೂ ಪುನೀತ್ ನಡುವಿನ ಕೆಲವು ಸನ್ನಿವೇಶಗಳನ್ನು ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್, ಕಟ್ನಲ್ಲಿ ಚಿತ್ರೀಕರಿಸಿಕೊಂಡರು. ಭಟ್ಟರ ಆಪ್ತಮಿತ್ರ ದುನಿಯಾ ಸೂರಿ ಕೂಡ ಚಿತ್ರೀಕರಣ ಸ್ಥಳದಲ್ಲಿದರು. ಬೆಳಗಾವಿಯಲ್ಲಿ ವಿಶ್ವಕನ್ನಡ ಸಮ್ಮೇಳನ ನಡೆಯುತ್ತಿರುವ ಕಾರಣ ಚಿತ್ರೀಕರಣಕ್ಕೆ ರಜೆ ಘೋಷಿಸಲಾಗಿದೆ.
ಪರಮಾತ್ಮ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಹಾಗೂ ವಿ ಹರಿಕೃಷ್ಣ ಅವರ ಸಂಗೀತವಿದೆ. ಚಿತ್ರದ ತಾರಾಬಳಗದಲ್ಲಿ ಭಟ್ಟರ ಫೇವರೇಟ್ ತಾರೆಗಳಾದ ರಂಗಾಯಣ ರಘು, ಅನಂತನಾಗ್ ಇದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಸಾಹಿತ್ಯ ಚಿತ್ರಕ್ಕಿದೆ.