Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗ್ಯತವಿದ್ದಾಗ ಮಾತ್ರ ವಾಹನ ಬಳಸಿ: ಪುನೀತ್
ಬೆಂಗಳೂರಿನ ಟ್ರಾಫಿಕ್ ಪೊಲೀಸರನ್ನು ಶಪಿಸುವವರೇ ಹೆಚ್ಚು. ಒಂದಿಲ್ಲೊಂದು ಕಾರಣಕ್ಕೆ ನಿತ್ಯ ಅವರನ್ನು ಹಳಿಯುತ್ತಲೇ ಇರುತ್ತಾರೆ. ಆದರೆ ಹದಗೆಡುತ್ತಿರುವ ಇವರ ಆರೋಗ್ಯದ ಕಡೆಗೆ ಕನ್ನ್ನಡ ತಾರೆಗಳಾದ ಪುನೀತ್ ರಾಜ್ ಕುಮಾರ್ ಮತ್ತ್ತು ತಾರಾ ಇಂದು ಕಾಳಜಿ ವಹಿಸಿದರು. ಬೆಂಗಳೂರು ಪ್ರೆಜರ್ ಟೌನ್ ಪೊಲೀಸ್ ಠಾಣೆಯ ಸಂಚಾರಿ ಪೊಲೀಸರಿಗೆ ಮಾಸ್ಕ್ ಗಳನ್ನು ವಿತರಿಸಿದರು.
ಸಂಚಾರಿ ಪೊಲೀಸರಿಗೆ ಮಾಸ್ಕ್ ವಿತರಿಸಿದ ಬಳಿಕ ಮಾತನಾಡುತ್ತಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ, ನಮಗೆ ರಕ್ಷಣೆ ಕೊಡುವವರಿಗೆ ನಾವು ರಕ್ಷಣೆ ಕಲ್ಪಿಸಬೇಕಾಗಿದೆ. ಸಂಚಾರಿ ಪೊಲೀಸರ ಆರೋಗ್ಯದ ಕಡೆಗೆ ಎಲ್ಲರೂ ಕಾಳಜಿ ವಹಿಸಬೇಕಾಗಿದೆ. ಅವರು ಚೆನ್ನಾಗಿದ್ದರೆ ಅವರು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದರು.
ನಟ ಪುನೀತ್ ರಾಜ್ ಕುಮಾರ್ ಮಾತನಾಡುತ್ತಾ, ಸಂಚಾರಿ ಪೊಲೀಸರು ಮಾಲಿನ್ಯವನ್ನೂ ಲೆಕ್ಕಿಸದೆ ಸ್ವತಃ ನಿಂತು ಗೈಡ್ ಮಾಡುತ್ತಿರುತ್ತಾರೆ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯ ಎಂದರು. ಅಗತ್ಯವಿದ್ದಾಗ ಮಾತ್ರ ವಾಹನಗಳನ್ನು ಬಳಸಿ. ಇದರಿಂದ ಟ್ರಾಫಿಕ್ ಸಮಸ್ಯೆ ಹಾಗೂ ಮಾಲಿನ್ಯವನ್ನು ತಡೆಗಟ್ಟಬಹುದು. ಎಲ್ಲ ಪೊಲೀಸ್ ಠಾಣೆಗಳಿಗೂ ಮಾಸ್ಕ್ ಗಳನ್ನು ವಿತರಿಸಬೇಕಾದ ಅಗತ್ಯವಿದೆ ಎಂದರು.
(ದಟ್ಸ್ ಕನ್ನಡ ಚಿತ್ರವಾರ್ತೆ)