Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿ ದೇವರುಗಳ ಭಕ್ತ ಮರೆಯಾಗಿ ಮೂರು ವರ್ಷ!
77 ವರ್ಷಗಳ ತುಂಬು ಜೀವನ ನಡೆಸಿ 'ಅಭಿಮಾನಿ ದೇವರು'ಗಳನ್ನು ಅರ್ಧ ಶತಮಾನ ಕಾಲ ಚಿತ್ರಗಳ ಮೂಲಕ ರಂಜಿಸಿದ್ದ ಮುತ್ತುರಾಜ್ ಜನಮಾನಸದಿಂದ ಮರೆಯಾಗಿದ್ದಾರೆಂದು ಇಂದಿಗೂ ಅನ್ನಿಸುವುದಿಲ್ಲ. ಅವರು ನಟಿಸಿದಂಥ ಅನ್ನುವುದಕ್ಕಿಂದ ಜೀವಂತಿಗೆ ತುಂಬಿದ್ದ ವಿಭಿನ್ನ ಪಾತ್ರಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅವರ ಸಜ್ಜನಿಕೆ ಇಂದಿಗೂ ಅವರನ್ನು ಜೀವಂತವಾಗಿಟ್ಟಿವೆ.
ರಾಜ್ ಮರೆಯಾದಂದಿನಿಂದ ಕನ್ನಡ ಚಿತ್ರರಂಗದಲ್ಲಿ ನಿರ್ವಾತ ಸೃಷ್ಟಿಯಾಗಿದ್ದು ನಿಜವೇ. ಅದನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಭೌತಿಕವಾಗಿ ಅವರಂಥ ಜೀವ ಮತ್ತೊಂದಿಲ್ಲ ಎಂಬ ನೋವು ಎಂದಿಗೂ ಕಾಡುತ್ತಲೇ ಇರುತ್ತದೆ. ಇದು ರಾಜ್ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ.
ರಾಜ್ ಅವರನ್ನು ತಮ್ಮ ಹೃದಯದಲ್ಲಿ ಭದ್ರವಾಗಿಟ್ಟುಕೊಂಡಿರುವ ಅಪಾರ ಜನಸ್ತೋಮ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ಪ್ರವಾಹೋಪಾದಿಯಲ್ಲಿ ಹರಿದು ಬರುತ್ತಿದೆ. ರಾಜ್ ಕುಟುಂಬವೂ ಇಂದು ಬಂದು ನಮನ ಸಲ್ಲಿಸಿತು. ಪಾರ್ವತಮ್ಮ, ಶಿವರಾಜ್, ಪುನೀತ್, ರಾಘವೇಂದ್ರ ಮತ್ತು ಕುಟುಂಬವರು ರಾಜ್ ಸಮಾಧಿಗೆ ಆರತಿ ಬೆಳಗಿದರು. ಕನ್ನಡ ಚಿತ್ರರಂಗದ ಅನೇಕ ಗಣ್ಯರು, ಹತ್ತಿರದ ಬಂಧುಗಳು, ಸ್ನೇಹಿತರು ಕೂಡ ರಾಜ್ ಮೂರನೇ ಪುಣ್ಯತಿಥಿಯಂದು ಕಂಬನಿ ಮಿಡಿದರು.
ತಮ್ಮ ಹೃದಯಾಂತರಾಳದಲ್ಲಿ ರಾಜ್ ಅವರನ್ನು ಬಚ್ಚಿಟ್ಟುಕೊಂಡಿರುವ ಕೆಲ ಅಭಿಮಾನಿಗಳು ರಾಜ್ ಕುರಿತು ಹುದುಗಿಸಿಟ್ಟುಕೊಂಡಿದ್ದ ಮಾತುಗಳನ್ನು ಹರಿಬಿಟ್ಟರೆ, ಕೆಲವರ ಮೌನವೇ ಮತಾಗಿತ್ತು. ಇನ್ನು ಕೆಲವರು ಕಂಬನಿ ಮಿಡಿದು ತಮ್ಮ ಭಾವನೆಗಳನ್ನು ಹರಿಬಿಟ್ಟರು. ಎಲ್ಲೆಲ್ಲೂ ರಾಜ್ ಜಯಘೋಷ ಮನೆಮಾಡಿತ್ತು. ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನೂ ಇಂದು ಹಮ್ಮಿಕೊಳ್ಳಲಾಗಿದೆ.
(ದಟ್ಸ್ ಕನ್ನಡ ಸಿನಿವಾರ್ತೆ)