Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಟ್ಟರಿಗೆ ಕುರಿ ಮರಿ ಥರದ ಹುಡುಗರು ಬೇಕಂತೆ!
ಕನ್ನಡ ಚಿತ್ರರಂಗದಲ್ಲಿ ದಾಖಲೆಯ 'ಮುಂಗಾರು ಮಳೆ' ಸುರಿಸಿದ ಯೋಗಾರಾಜ್ಭಟ್ ನಿರ್ದೇಶನದ 'ಪಂಚರಂಗಿ' ಚಿತ್ರದ ಹಾಡುಗಳ ಚಿತ್ರೀಕರಣ ಸಿಲಿಕಾನ್ಸಿಟಿಯಲ್ಲಿ ನಡೆದಿದೆ. ನಿರ್ದೇಶಕರೇ ಬರೆದಿರುವ 'ಹುಡುಗರು ಬೇಕು ಕುರಿಯ ಮರಿ ಥರ ಹುಡುಗರು ಬೇಕು - ನಾವು ರೆಡಿ ನಾವು ರೆಡಿ...' ಎಂಬ ಗೀತೆಯ ಚಿತ್ರೀಕರಣ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ಶಶಿಧರ್ ಅಡಪ ರವರು ನಿರ್ಮಿಸಿದ ಭವ್ಯವಾದ ಸೆಟ್ನಲ್ಲಿ ನಡೆಯಿತು.
ದಿಗಂತ್, ನಿಧಿಸುಬ್ಬಯ್ಯ ಹಾಗೂ 24 ಜನ ನೃತ್ಯಗಾರರು ಶಂಕರ್ ನೃತ್ಯ ಸಂಯೋಜಿಸಿದ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.ದಿಗಂತ್ ಹಾಗೂ ಸಹ ಕಲಾವಿದರ ಅಭಿನಯದಲ್ಲಿ ಚಿತ್ರದ 'ಪಂಚರಂಗಿ ಹಾಡುಗಳು ಪಂಚರಂಗಿ ಟೈರುಗಳು ಏಳೋ ಎಂಟೋ ಸ್ವರಗಳು ಎಲ್ಲಾ ಬಿಟ್ಟಿ ಪದಗಳು' ಎಂಬ ಚಿತ್ರದ ಮತ್ತೊಂದು ಗೀತೆ ಎಚ್.ಎಸ್.ಆರ್ ಲೇಔಟ್ನ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ಟೆಕ್ನಾಲಜಿಯಲ್ಲಿ ಚಿತ್ರೀಕರಣಗೊಂಡಿದೆ. ಈ ಗೀತೆಗೂ ಶಂಕರ್ ಅವರೇ ನೃತ್ಯ ನಿರ್ದೇಶನ ಮಾಡಿದ್ದಾರೆ.
ಯೋಗರಾಜ್ ಮೂವೀಸ್ ಎಂಬ ಚಲನಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿರುವ ಯೋಗರಾಜ್ಭಟ್ ಸಂಸ್ಥೆಯ ಪ್ರಥಮ ಪ್ರಯತ್ನವಾಗಿ 'ಪಂಚರಂಗಿ' ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಂ.ಕೆ.ಸುಬ್ರಹ್ಮಣ್ಯ ಅವರು ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ಪವನ್ಕುಮಾರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ನಿರ್ದೆಶಕರು ಸ್ವತಃ ಸಂಭಾಷಣೆ ಬರೆದಿದ್ದಾರೆ.
ಮನೋಮೂರ್ತಿ ಸಂಗೀತ, ತ್ಯಾಗರಾಜನ್ ಛಾಯಾಗ್ರಹಣ, ಜೋನಿಹರ್ಷ ಸಂಕಲನ, ಶಶಿಧರ್ ಅಡಪ ಕಲಾನಿರ್ದೇಶನ ಮತ್ತು ಹರ್ಷ ನೃತ್ಯನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ದಿಗಂತ್, ನಿಧಿಸುಬ್ಬಯ್ಯ, ಅನಂತನಾಗ್, ರಾಜುತಾಳಿಕೋಟೆ, ಪವನ್ಕುಮಾರ್, ಸುಂದರ್ರಾಜ್, ಪದ್ಮಜಾರಾವ್, ಸುಧಾಬೆಳವಾಡಿ, ರಮ್ಯಾಬರ್ನಾ, ನಾಗೇಂದ್ರ ಶಾ, ಸತೀಶ್, ಸೌಮ್ಯ, ನಾಗರಾಜ್ ಅರಸು, ಸುಧಾಕರ್(ರಾಕ್ಲೈನ್ ಪ್ರೊಡಕ್ಷನ್ಸ್) ಮುಂತಾದವರಿದ್ದಾರೆ.