Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಂಚಕೋಟಿ ಕನ್ನಡಿಗರ ಕಣ್ಮಣಿ ಡಾ.ರಾಜ್ ಅಸ್ತಂಗತ!!
ಬೆಂಗಳೂರು : ಕನ್ನಡ ಚಿತ್ರರಂಗದ ಜೀವಂತ ದಂತಕತೆ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಡಾ.ರಾಜ್ಕುಮಾರ್(77) ಇನ್ನಿಲ್ಲ.
ಹೃದಯಾಘಾತದಿಂದ ನಗರದ ರಾಮಯ್ಯ ಆಸ್ಪತ್ರೆಯಲ್ಲಿ ಅವರು ಬುಧವಾರ ಮಧ್ಯಾಹ್ನ 1.45ರ ಸುಮಾರಿನಲ್ಲಿ ನಿಧನರಾದರು. ಇತ್ತೀಚೆಗೆ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ತೀವ್ರ ಎದೆನೋವು ಮತ್ತು ಉಸಿರಾಟದ ಸಮಸ್ಯೆಯಿಂದ ಸೊರಗಿದ್ದ ರಾಜ್, ಕೆಲವು ವಾರಗಳ ಹಿಂದಷ್ಟೇ, ವೋಕ್ಹಾರ್ಟ್ ಆಸ್ಪತ್ರೆಯಲ್ಲಿ ಚೇತರಿಕೆ ಕಂಡಿದ್ದರು.
ತಮ್ಮ ಸಹೋದರ ವರದರಾಜು ನಿಧನದಿಂದ ರಾಜ್ಕುಮಾರ್ ಈಚಿನ ದಿನಗಳಲ್ಲಿ ತಲ್ಲಣಗೊಂಡಿದ್ದರು. ಹಿರಿಯ ನಟನ ನಿಧನದಿಂದ ಕನ್ನಡ ಚಿತ್ರರಂಗ ಯಜಮಾನನಿಲ್ಲದ ಮನೆಯಂತಾಗಿದೆ. ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಗಮನೀಯ ಪಾತ್ರಗಳಲ್ಲಿ ತಮ್ಮ ಕಲಾನೈಪುಣ್ಯತೆಯನ್ನು ಪ್ರದರ್ಶಿಸಿದ್ದ ರಾಜ್ ಅವರಿಗೆ ಪದ್ಮಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳು ಮತ್ತು ಬಿರುದುಗಳು ಸಂದಾಯವಾಗಿದ್ದವು.
ಅವರ ನಿಧನದಿಂದ ಅಭಿಮಾನಿಗಳು ಮತ್ತು ರಾಜ್ ಕನಸಾದ ‘ಭಕ್ತ ಅಂಬರೀಷ’ ಕನಸಾಗಿಯೇ ಉಳಿದಿದೆ.
1929ರ ಏ.24ರಂದು ಗಾಜನೂರಿನಲ್ಲಿ ಜನಿಸಿದ್ದ ರಾಜ್, ತಮ್ಮ 45ವರ್ಷಗಳ ಬಣ್ಣದ ಬದುಕಿನಲ್ಲಿ ಎತ್ತರದ ಸ್ಥಾನವನ್ನು ತಲುಪಿದ್ದರು. ಬಂಗಾರದ ಮನುಷ್ಯ, ಕಸ್ತೂರಿನಿವಾಸ, ಜೀವನಚೈತ್ರ ಸೇರಿದಂತೆ ಅನೇಕ ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿವೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್