Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯಿಪ್ರಕಾಶ್ ನಿರ್ದೇಶನದಲ್ಲಿ ಆದಿಚುಂಚನಗಿರಿ ಶ್ರೀ
ಈ ಚಿತ್ರಕ್ಕೆ ಸಾಯಿ ಪ್ರಕಾಶ್ ಆಕ್ಷನ್, ಕಟ್ ಹೇಳಲಿದ್ದಾರೆ. ಚಿತ್ರದಲ್ಲಿ ಸ್ವತಃ ಬಾಲಗಂಗಾಧರ ಸ್ವಾಮೀಜಿಗಳು ಅಭಿನಯಿಸಲು ತಮ್ಮ ಒಪ್ಪಿಗೆಯನ್ನು ಸೂಚಿಸಿರುವುದು ವಿಶೇಷ. "ಬಹಳಷ್ಟು ಜನ ತಮ್ಮ ಬಳಿಗೆ ಬಂದು ಆದಷ್ಟು ಬೇಗ ಸಿನಿಮಾ ಮಾಡುವಂತೆ ವಿನಂತಿಸಿಕೊಂಡಿದ್ದರು. ನಾನು ಸಾಧಿಸುವುದು ಇನ್ನೂ ಸಾಕಷ್ಟಿದೆ ಎಂದು ಅವರಿಗೆ ಹೇಳಿದ್ದೆ. ಈಗ ಕಾಲ ಕೂಡಿಬಂದಿದೆ" ಎಂದು ಸ್ವಾಮೀಜಿಗಳು ಪ್ರತಿಕ್ರಿಯಿಸಿದ್ದಾರೆ.
"ಆದಿಚುಂಚನಗಿರಿ ಮಠ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಮಠದ ಅಸಂಖ್ಯಾತ ಭಕ್ತರ ಭಾವನೆಗಳಿಗೆ ಧಕ್ಕೆ ಬರದಂತೆ ಚಿತ್ರವನ್ನು ತೆರೆಗೆ ತರಬೇಕು ಎಂದು ನಿರ್ಮಾಪಕ ನರಸಿಂಹಯ್ಯ ಅವರಿಗೆ ಸೂಚಿಸಿರುವುದಾಗಿ" ಬಾಲಗಂಗಾಧರನಾಥ ಸ್ವಾಮೀಜಿಗಳು ವಿವರ ನೀಡಿದ್ದಾರೆ .
ಆದರೆ ಸಾಯಿ ಪ್ರಕಾಶ್ ಪ್ರಕಾರ, ಚಿತ್ರದಲ್ಲಿ ಅಭಿನಯಿಸಲು ರೆಬಲ್ ಸ್ಟಾರ್ ಅಂಬರೀಷ್ ಸೇರಿದಂತೆ ಹಲವಾರು ಕಲಾವಿದರನ್ನು ಕೇಳಲಾಗಿದೆ ಎಂದಿದ್ದಾರೆ. ಅದರೆ ಹೀಗೆ ಮಾಡುವುದರಿಂದ ಇದೊಂದು ಒಕ್ಕಲಿಗರ ಚಿತ್ರ ಎಂಬ ಭಾವನೆ ಜನರಲ್ಲಿ ಮೂಡುವುದಿಲ್ಲವೇ? ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಚಿತ್ರದಲ್ಲಿ ಮಠದ 2,000 ವರ್ಷಗಳ ಗತ ಇತಿಹಾಸವನ್ನು ತೋರಿಸಲಾಗುತ್ತದೆ ಎಂದಿದ್ದಾರೆ ಸಾಯಿಪ್ರಕಾಶ್. ಆದರೆ ರಾಜ್ಯ ರಾಜಕೀಯದಲ್ಲಿ ಮಠ ಸಾಕಷ್ಟು ಪ್ರಭಾವ ಬೀರಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹಾಗೂ ಸ್ವಾಮೀಜಿಗಳ ನಡುವಿನ ಸಂಬಂಧಗಳು ಚಿತ್ರದಲ್ಲಿ ತೋರಿಸಲಾಗುತ್ತದೆಯೇ ಎಂಬ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಆದರೆ ಎಲ್ಲಾ ರಾಜಕೀಯ ಅಂಶಗಳಿಂದ ಚಿತ್ರ ಹೊರತಾಗಿರಬೇಕು ಎಂಬುದು ಸ್ವಾಮೀಜಿಗಳ ಸೂಚನೆ ಎನ್ನಲಾಗಿದೆ.