Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಿರ್ದೇಶಕನ ಚಿತ್ರದಲ್ಲಿ ದಿಗಂತ್-ಕೃತಿ
ಬಾಲಿವುಡ್ ಹಿರಿಯ ನಿರ್ದೇಶಕರಾದ ರಾಜ್ ಕುಮಾರ್ ಸಂತೋಷಿಯವರ ಹಲವು ಚಿತ್ರಗಳಿಗೆ ಸಹಾಯಕರಾಗಿ ಕೆಲಸ ಮಾಡಿದ್ದ ರಣದೀಪ್, ಇದೀಗ ಕನ್ನಡದಲ್ಲಿ 'ದಿಗಂತ್'ಗಾಗಿ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಛಾಯಾಗ್ರಾಹಕ ಮಹೇಶ್ ತಲ್ಕಾಡ್ ತಮ್ಮ ಮುಂಬೈ ಸ್ನೇಹಿತರ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಚಿತ್ರದ ಹೆಸರು, 'ಮಿಂಚಾಗಿ ನೀನು ಬರಲು'.
ಬಹಳ ದಿನಗಳಿಂದಲೂ ನಟ ದಿಗಂತ್, ಮಹೇಶ್ ತಲ್ಕಾಡ್ ಚಿತ್ರದಲ್ಲಿ ನಟಿಸುತ್ತಾರೆಂಬ ಸುದ್ದಿ ಗಾಂಧಿನಗರದ ಸುತ್ತ ಗಿರಕಿ ಹೊಡೆಯುತ್ತಲೇ ಇತ್ತು. ಅದೀಗ ನಿಜವಾಗಿದೆ. ಸದ್ದಿಲ್ಲದೇ ಚಿತ್ರ ಪ್ರಾರಂಭವಾಗಿ 10 ದಿನಗಳ ಶೂಟಿಂಗ್ ಸಹ ಮುಗಿಸಿದೆ. ಆದರೂ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ ಎಂಬುದು ಚಿತ್ರತಂಡದ ಹೇಳಿಕೆ. ಇರಬಹುದೇನೋ...!
ಸ್ಟ್ರಾಬೆರಿ ಎಂಟರ್ ಟೈನ್ ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗುತ್ತಿದ್ದು ನಿರ್ದೇಶಕ ರಣದೀಪ್ ಈ ಚಿತ್ರದ ನಿರ್ಮಾಪಕರಲ್ಲೊಬ್ಬರೂ ಆಗಿದ್ದಾರೆ. ದಿಗಂತ್ ಜೊತೆ ನಾಯಕಿಯಾಗಿ ಕೃತಿ ಖರಬಂಧ ನಟಿಸುತ್ತಿದ್ದಾರೆ. ದಿಲೀಪ್ ರಾಜ್ ಕೂಡ ಪ್ರಮುಖ ಪಾತ್ರವೊಂದನ್ನು ಪೋಷಿಸುತ್ತಿದ್ದಾರೆ. ವಿ ಹರಿಕೃಷ್ಣ ಸಂಗೀತ, ಮಹೇಶ್ ತಲ್ಕಾಡ್ ಛಾಯಾಗ್ರಹಣ ಚಿತ್ರಕ್ಕಿದೆ. ಇದೊಂದು ಸಸ್ಪೆನ್ಸ್ ಲವ್ ಸ್ಟೋರಿ ಎಂದಿದೆ ಚಿತ್ರತಂಡ. (ಒನ್ ಇಂಡಿಯಾ ಕನ್ನಡ)