Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನೆಮಾ ಮತ್ತು ಸರ್ಕಾರದ ಜಟಾಪಟಿಗೆ ಅಲ್ಪವಿರಾಮ
ರಿಮೇಕು ಚಿತ್ರಗಳಿಗೂ ಸಹಾಯಧನ ಮತ್ತು ತೆರಿಗೆ ವಿನಾಯಿತಿ ನೀಡಬೇಕೆಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಕೊಂಡು ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘ ಕರೆದಿದ್ದ ಫೆ.14ರ ಚಿತ್ರೋದ್ಯಮ ಬಂದ್ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ.
ಮುಂಬರುವ ಬಜೆಟ್ನಲ್ಲಿ ಚಿತ್ರೋದ್ಯಮದ ಬೇಡಿಕೆಗಳನ್ನು ಈಡೇರಿಸಲಾಗುವುದು ಮತ್ತು ಅಭ್ಯುದಯಕ್ಕಾಗಿ ಸರ್ವರೀತಿಯ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ಸರ್ಕಾರದಿಂದ ಸಿಕ್ಕಿದ್ದರಿಂದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ಬಜೆಟ್ನಲ್ಲಿ ಭರವಸೆಗಳು ಈಡೇರದಿದ್ದರೆ ಫೆಬ್ರವರಿ 29ರಂದು ಮುಷ್ಕರ ಹೂಡಲಾಗುವುದು ಎಂದು ನಿರ್ಮಾಪಕರ ಸಂಘದ ಕಾರ್ಯದರ್ಶಿ ಜೋ ಸೈಮನ್ ದಟ್ಸ್ಕನ್ನಡಕ್ಕೆ ತಿಳಿಸಿದರು.
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘದ ಸಭೆಯ ನಂತರ ಚಿತ್ರೋದ್ಯಮಕ್ಕೆ ಸಂಬಂಧಿಸಿದ ಎಲ್ಲ ಬೇಡಿಕೆಗಳ ಅಹವಾಲನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಮತ್ತು ತಂತ್ರಜ್ಞರು ಹೋರಾಟಕ್ಕೆ ಬೆಂಬಲ ಸೂಚಿಸಿವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖ್ಯ ಕಾರ್ಯದರ್ಶಿ ಐ.ಎಂ.ವಿಠಲಮೂರ್ತಿ ಅವರು, ಚಿತ್ರೋದ್ಯಮದ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿ, ಬೇಡಿಕೆ ಈಡೇರಲು ಎಲ್ಲ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರಿಂದ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ನಿರ್ಮಾಪಕರ ಸಂಘದ ಕಾರ್ಯದರ್ಶಿ ಸಂದೇಶ್ ನಾಗರಾಜ್ ಹೇಳಿದ್ದಾರೆ.
ಉದ್ಯಮದ ಉಳಿವಿಗಾಗಿ ರಿಮೇಕು ಸ್ವಮೇಕೆನ್ನದೆ ಎಲ್ಲ ಚಿತ್ರಗಳಿಗೂ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಚಿತ್ರಕರ್ಮಿಗಳು ಹೋರಾಟಕ್ಕಿಳಿದಿದ್ದಾರೆ.
(ದಟ್ಸ್ಸಿನಿ ವಾರ್ತೆ)
ಪೂರಕ
ಓದಿಗೆ
ಸಿನಿಮಾ
ಮತ್ತು
ಸರಕಾರದ
ನಡುವೆ
ಜಟಾಪಟಿ
ಎಲ್ಲಾ
ಕನ್ನಡ
ಚಿತ್ರಗಳಿಗೂ
ಸಬ್ಸಿಡಿಗೆ
ಆಗ್ರಹ