Just In
Don't Miss!
- News
ದೆಹಲಿ ಆವರಿಸಿದ ದಟ್ಟ ಮಂಜು; 50ಕ್ಕೂ ಹೆಚ್ಚು ವಿಮಾನಗಳು ವಿಳಂಬ
- Lifestyle
ನೀವು ಅಸಡ್ಡೆ ಮಾಡುವ ಆಲೂಗಡ್ಡೆಯಲ್ಲಿದೆ ಸೌಂದರ್ಯವರ್ಧಕ ಗುಣಗಳು
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬೇಡಿಕೆ ಹೆಚ್ಚಿದಂತೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
- Finance
ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳ ನವೀಕರಣವನ್ನು ಮುಂದೂಡಿದ ವಾಟ್ಸಾಪ್
- Sports
ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ, ಎಂಐ ಆರಿಸುತ್ತಾ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಲ್ಲಿಕಾ ಶೆರಾವತ್ ಕೊಲೆಗೆ ಸಂಚು ರೂಪಿಸಿದ್ದವನ ಬಂಧನ
ಬಾಲಿವುಡ್ ಬೆಡಗಿ ಮಲ್ಲಿಕಾ ಶೆರಾವತ್ ಮೇಲೆ ಗುಂಡಿನ ದಾಳಿ ಮಾಡಲು ಸಂಚು ರೂಪಿಸಿದ್ದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತರು 13 ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಜೇಶ್ ದಲಾಲ್ (35) ಹಾಗೂ ರಾಜೀವ್ (28) ಬಂಧಿತ ಆರೋಪಿಗಳಿಂದ 9 ಎಂಎಂ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ ದಲಾಲ್ ಪದವೀಧರನಾಗಿದ್ದು ಈತನ ತಂದೆ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. "ಇವನು ವಿವೇಕ್ ವಿಹಾರ್ ಪ್ರದೇಶದಲ್ಲಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಯಿತು. ಅಕ್ಟೋಬರ್ 2006ರಲ್ಲಿ ಮಲ್ಲಿಕಾ ಶೆರಾವತ್ ಅವರು ಜಾಟ್ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಲಾಲ್ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿದ್ದ " ಎಂಬ ಅಂಶಗಳು ವಿಚಾರಣೆ ವೇಳೆ ಬಯಾಲಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಬಾಂದ್ರಾ ಬಳಿಯ ಮಲ್ಲಿಕಾರ ಫ್ಲಾಟ್ನಲ್ಲಿ ದಾಳಿ ಮಾಡಲು ಸಂಚು ರೂಪಿಸಿದ್ದ. ಆದರೆ ನವೆಂಬರ್ 2006ರಲ್ಲಿ ಮುಂಬೈ ಪೊಲೀಸರಿಗೆ ಕೊಲ್ಲಾಪುರದಲ್ಲಿ ಸಿಕ್ಕಿಬೀಳುವ ಮೂಲಕ ಈತನ ಪ್ಲಾನ್ಗಳೆಲ್ಲವೂ ಉಲ್ಟಾ ಆಗಿದ್ದವು. ಈತನ ಮೇಲಿದ್ದ 13 ಅಪರಾಧ ಪ್ರಕರಣ ವಿಚಾರಣೆಗಾಗಿ ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಮೂರು ವರ್ಷ ತಿಹಾರ್ ಜೈಲೂಟ ತಿಂದ ದಲಾಲ್ ಬಳಿಕ ಪೆರೋಲ್ ಮೇಲೆ ಹೊರಬಂದು ಪೊಲೀಸರ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಂಡು ಅಲೆಯುತ್ತಿದ್ದ.ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಮಲ್ಲಿಕಾ ಶೆರಾವತ್ ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.