Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೇಸ್ಬುಕ್ಗೆ ಲಗ್ಗೆ ಹಾಕಿದ ವೀರಾಸ್ವಾಮಿ ರವಿಚಂದ್ರನ್
ಕನ್ನಡ ಚಿತ್ರಗಳ ಕನಸುಗಾರ, ರಸಿಕ, ಒಂಟಿ ಸಲಗ, ಛಲ ಬಿಡದ ತ್ರಿವಿಕ್ರಮ, ಕ್ರೇಜಿಸ್ಟಾರ್, ದಿ ಶೋ ಮ್ಯಾನ್ ಖ್ಯಾತಿಯ ವೀರಾಸ್ವಾಮಿ ರವಿಚಂದ್ರನ್ ಫೇಸ್ಬುಕ್ಗೆ ಲಗ್ಗೆ ಹಾಕಿದ್ದಾರೆ. ಕ್ರೇಜಿ ಸ್ಟಾರ್ ಅಭಿಮಾನಿಗಳಿಗೆ ಈ ಮೂಲಕ ಅವರು ಇನ್ನಷ್ಟು ಹತ್ತಿರವಾಗಿದ್ದಾರೆ.
ಫೇಸ್ಬುಕ್ನಲ್ಲಿ ರವಿಚಂದ್ರನ್ ಕನಸುಗಳು, ಅವರ ವೈಯಕ್ತಿಕ ವಿವರಗಳು, ಪ್ರಶಸ್ತಿ ಪುರಸ್ಕಾರಗಳನ್ನು ಕಾಣಬಹುದು. ತಮ್ಮ ಬಾಳ ಪಯಣದಲ್ಲಿ ಈಗಾಗಲೆ ಅರ್ಧ ಸೆಂಚುರಿ ಬಾರಿಸಿರುವ ಕ್ರೇಜಿಸ್ಟಾರ್ ತಮ್ಮ ಪುತ್ರ ಮನೋರಂಜನ್ ಅವರನ್ನು ಬೆಳ್ಳಿತೆರೆಗೆ ಪರಿಚಯಿಸುವ ಸಿದ್ಧತೆಯಲ್ಲೂ ಇದ್ದಾರೆ.
ಹಿಂದಿ ಚಿತ್ರರಂಗಕ್ಕೆ ರಾಜ್ ಕಪೂರ್ ಹೇಗೋ ಕನ್ನಡಕ್ಕೆ ರವಿಚಂದ್ರನ್ ಹಾಗೆ. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡುರುವ ಕೊಡುಗೆಗಳಲ್ಲಿ ಹೊಸ ಅಲೆಯ ಸಂಗೀತ ಝಲಕ್ ಗಮನಾರ್ಹವಾದುದು. ಈಗಾಗಲೆ ಫೇಸ್ಬುಕ್ನಲ್ಲಿ ಕನ್ನಡದ ಹಲವಾರು ಸಿನೆಮಾ ತಾರೆಗಳಿದ್ದಾರೆ. ಇವರಲ್ಲಿ ಹೊಸ ಪೀಳಿಗೆಯ ತಾರೆಗಳೇ ಅಧಿಕ.
ಫೇಸ್ಬುಕ್ಗೆ ಬರಲು ಹಳೆಯ ಪೀಳಿಗೆಯ ತಾರೆಗಳು ಯಾಕೋ ಏನೋ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಇಂತಹ ಸಂದರ್ಭದಲ್ಲಿ ಹಳೆಯ ಮತ್ತು ಹೊಸ ಪೀಳಿಗೆಯ ಕೊಂಡಿಯಂತಿರುವ ರವಿಚಂದ್ರನ್ ಫೇಸ್ಬುಕ್ಗೆ ಬಂದಿರುವುದು ಗಮನಾರ್ಹ ಬೆಳವಣಿಗೆ. ಫೇಸ್ಬುಕ್ನಲ್ಲಿ ರವಿಚಂದ್ರನ್ ಅವರನ್ನು ನೀವೂ ಬರಮಾಡಿಕೊಳ್ಳಿ. (ಒನ್ಇಂಡಿಯಾ ಕನ್ನಡ)