Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಕರನ ಜೊತೆ ಡಯಾನಾ ಪ್ರೇಮ ವಿವಾಹ
ಪ್ರೇಮವಿವಾಹವನ್ನು ಒಪ್ಪುವ ಪೋಷಕರು ನಮ್ಮಲ್ಲಿ ವಿರಳ. 'ಡಯಾನ' ಕೂಡ ಪ್ರೇಮವಿವಾಹವಾದವಳು. ಈ ವಿವಾಹಕ್ಕೆ ಪ್ರಿಯಕರನ ಪೋಷಕರ ಸಮ್ಮತಿ ಇರಲಿಲ್ಲ. ಇದೇ ಕಾರಣಕ್ಕೆ ಮಗ ಇಲ್ಲದ ಸಮಯ ನೋಡಿ 'ಡಯಾನ'ಳನ್ನು ಅತ್ತೆಮಾವ ಮನೆಯಿಂದ ಹೊರದೂಡುತ್ತಾರೆ. ಮನೆಗೆ ಬಂದ ಮಗನಿಗೆ ವಿಷಯ ತಿಳಿದು ಡಯಾನಳ ಹುಡುಕಾಟಕ್ಕೆ ಹೊರಡುತ್ತಾನೆ.
ಅನ್ವೇಷಣೆಯ ಆತುರದಲ್ಲಿ ಈತನ ಕಾರು ವೇಗವಾಗಿ ಚಲಿಸುತ್ತಿದಾಗ ಪ್ರವಾಸಕ್ಕೆ ಹೊರಟ್ಟಿದ ಯುವಪ್ರೇಮಿಗಳ ಮೇಲೆ ಕೆಸರು ಹಾರುತ್ತದೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿಯಾಗಿ ಹೊಡೆದಾಟವು ನಡೆಯುತ್ತದೆ. ಈ ಸನ್ನಿವೇಶವನ್ನು 'ಡಯಾನ' ಚಿತ್ರಕ್ಕಾಗಿ ನಿರ್ದೇಶಕ ಕವಿರಾಜೇಶ್ ಉಲ್ಲಾಳ ಗ್ರಾಮದಲ್ಲಿ ಚಿತ್ರಿಸಿಕೊಂಡರು. ಸೂರ್ಯಪ್ರಕಾಶ್ ಸಾಹಸ ನಿರ್ದೇಶನ ಮಾಡಿದರು. ನಾಯಕ ಧ್ರುವ ಹಾಗೂ ಸಹ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಲ್ಗೊಂಡಿದ್ದರು.
ಗೆದ್ದು ಬಾ ಇಂಡಿಯಾ ಎಂಬ ಘೋಷಣೆಯೊಂದಿಗೆ ಒಲಂಪಿಕ್ ಕ್ರೀಡಾಕೂಟದ ಕಥೆಯನ್ನಾಧರಿಸಿದ 'ಡಯಾನ ಚಿತ್ರಕ್ಕೆ ಕವಿರಾಜೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಐದು ಗೀತೆಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಎಂ.ಆರ್.ಚೌಹಾಣ್ ಛಾಯಾಗ್ರಹಣ, ಶ್ರೀನಿವಾಸ ಪಿ ಬಾಬು ಸಂಕಲನ ಮತ್ತು ಥಾಮಸ್ ಅವರ ನಿರ್ಮಾಣನಿರ್ವಹಣೆ 'ಡಯಾನ' ಚಿತ್ರಕ್ಕಿದೆ. ಧ್ರುವ, ಸಂಗೀತಾ ಶೆಟ್ಟಿ, ಸನಾತನಿ, ಪ್ರಮೀಳಾಜೋಷಾಯಿ, ಡಾ.ಶರ್ಮ, ಚಿತ್ರಾಶೆಣೈ, ಡಿಂಗ್ರಿನಾಗರಾಜ್ ಮುಂತಾದವರು ಚಿತ್ರದ ತಾರಬಳಗದಲ್ಲಿದ್ದಾರೆ.