Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಕರನ ಜೊತೆ ಡಯಾನಾ ಪ್ರೇಮ ವಿವಾಹ
ಪ್ರೇಮವಿವಾಹವನ್ನು ಒಪ್ಪುವ ಪೋಷಕರು ನಮ್ಮಲ್ಲಿ ವಿರಳ. 'ಡಯಾನ' ಕೂಡ ಪ್ರೇಮವಿವಾಹವಾದವಳು. ಈ ವಿವಾಹಕ್ಕೆ ಪ್ರಿಯಕರನ ಪೋಷಕರ ಸಮ್ಮತಿ ಇರಲಿಲ್ಲ. ಇದೇ ಕಾರಣಕ್ಕೆ ಮಗ ಇಲ್ಲದ ಸಮಯ ನೋಡಿ 'ಡಯಾನ'ಳನ್ನು ಅತ್ತೆಮಾವ ಮನೆಯಿಂದ ಹೊರದೂಡುತ್ತಾರೆ. ಮನೆಗೆ ಬಂದ ಮಗನಿಗೆ ವಿಷಯ ತಿಳಿದು ಡಯಾನಳ ಹುಡುಕಾಟಕ್ಕೆ ಹೊರಡುತ್ತಾನೆ.
ಅನ್ವೇಷಣೆಯ ಆತುರದಲ್ಲಿ ಈತನ ಕಾರು ವೇಗವಾಗಿ ಚಲಿಸುತ್ತಿದಾಗ ಪ್ರವಾಸಕ್ಕೆ ಹೊರಟ್ಟಿದ ಯುವಪ್ರೇಮಿಗಳ ಮೇಲೆ ಕೆಸರು ಹಾರುತ್ತದೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿಯಾಗಿ ಹೊಡೆದಾಟವು ನಡೆಯುತ್ತದೆ. ಈ ಸನ್ನಿವೇಶವನ್ನು 'ಡಯಾನ' ಚಿತ್ರಕ್ಕಾಗಿ ನಿರ್ದೇಶಕ ಕವಿರಾಜೇಶ್ ಉಲ್ಲಾಳ ಗ್ರಾಮದಲ್ಲಿ ಚಿತ್ರಿಸಿಕೊಂಡರು. ಸೂರ್ಯಪ್ರಕಾಶ್ ಸಾಹಸ ನಿರ್ದೇಶನ ಮಾಡಿದರು. ನಾಯಕ ಧ್ರುವ ಹಾಗೂ ಸಹ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಲ್ಗೊಂಡಿದ್ದರು.
ಗೆದ್ದು ಬಾ ಇಂಡಿಯಾ ಎಂಬ ಘೋಷಣೆಯೊಂದಿಗೆ ಒಲಂಪಿಕ್ ಕ್ರೀಡಾಕೂಟದ ಕಥೆಯನ್ನಾಧರಿಸಿದ 'ಡಯಾನ ಚಿತ್ರಕ್ಕೆ ಕವಿರಾಜೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಐದು ಗೀತೆಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಎಂ.ಆರ್.ಚೌಹಾಣ್ ಛಾಯಾಗ್ರಹಣ, ಶ್ರೀನಿವಾಸ ಪಿ ಬಾಬು ಸಂಕಲನ ಮತ್ತು ಥಾಮಸ್ ಅವರ ನಿರ್ಮಾಣನಿರ್ವಹಣೆ 'ಡಯಾನ' ಚಿತ್ರಕ್ಕಿದೆ. ಧ್ರುವ, ಸಂಗೀತಾ ಶೆಟ್ಟಿ, ಸನಾತನಿ, ಪ್ರಮೀಳಾಜೋಷಾಯಿ, ಡಾ.ಶರ್ಮ, ಚಿತ್ರಾಶೆಣೈ, ಡಿಂಗ್ರಿನಾಗರಾಜ್ ಮುಂತಾದವರು ಚಿತ್ರದ ತಾರಬಳಗದಲ್ಲಿದ್ದಾರೆ.