Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂ 17ರಂದು ಪಿವಿಆರ್ ನಲ್ಲಿ ಬೆಟ್ಟದ ಜೀವ ರಿಲೀಸ್
ಜೂನ್ 17 ರಂದು ಪಿವಿಆರ್ ಕೋರಮಂಗಳ, ಮಲ್ಲೇಶ್ವರಂನ ಐನೋಕ್ಸ್ ಮಂತ್ರಿ ಮಾಲ್ ಗೆ ಹೋದರೆ ಅಪ್ಪಟ ಕನ್ನಡ ಮಣ್ಣಿನ ಸದಭಿರುಚಿ ಚಿತ್ರವನ್ನು ಕಾಣಬಹುದು. ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹೋದರೆ ಥೇಟರ್ ನಲ್ಲಿ ಹೆಚ್ಚು ದಿನ ಚಿತ್ರ ಉಳಿಯುತ್ತದೆ ಎಂಬ ನಗ್ನ ಸತ್ಯವನ್ನು ಹೊರಗೆಡವಲೇ ಬೇಕು. ಚಿತ್ರ ಚೆನ್ನಾಗಿದ್ದರೂ ಥೇಟರ್ ನಲ್ಲಿ ಹೆಚ್ಚು ದಿನ ಇರಲಿಲ್ಲ ಎಂದು ಕೊರಗದೆ ಹೆಚ್ಚೆಚ್ಚು ಜನ ಥೇಟರ್ ಗೆ ಹೋಗಿ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದು ಹ್ಯಾಟ್ರಿಕ್ ನಿರ್ದೇಶಕ ಪಿ ಶೇಷಾದ್ರಿ ಕೇಳಿಕೊಂಡಿದ್ದಾರೆ.
ಜ್ಞಾನ ಪೀಠ ಪ್ರಶಸ್ತಿ ವಿಜೇತ ಕೋಟ ಶಿವರಾಮ ಕಾರಂತರ ಕಾದಂಬರಿ ಆಧಾರಿತ ಚಿತ್ರವನ್ನು ಬಸಂತ್ ಕುಮಾರ್ ಪಾಟೀಲ್ ನಿರ್ಮಿಸಿದ್ದಾರೆ. ದತ್ತಣ್ಣ, ಸುಚೇಂದ್ರ ಪ್ರಸಾದ್, ರಾಮೇಶ್ವರಿ ವರ್ಮ, ಲಕ್ಷ್ಮಿ ಹೆಗಡೆ ಮುಂತಾದವರ ಮನೋಜ್ಞ ಅಭಿನಯವನ್ನು ಮೆಚ್ಚಲು ಒಮ್ಮೆಯಾದರೂ ಚಿತ್ರಮಂದಿರಕ್ಕೆ ಭೇಟಿ ನೀಡಿ ನಿಮ್ಮ ಅಭಿಪ್ರಾಯ ತಿಳಿಸಿ.
1943 ಪ್ರಕಟಗೊಂಡ ಕಾರಂತರ ಈ ಕೃತಿ ಆಧಾರ ಈ ಚಿತ್ರಕ್ಕೆ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಪರಿಸರ ಚಿತ್ರ ಎಂದು ಪ್ರಶಸ್ತಿ ಸಿಕ್ಕಿದೆ. ಆದರೆ, ಇದರಲ್ಲಿ ಮಾನವ ಸಂಬಂಧಗಳು, ಜೀವನ ಪ್ರೀತಿ, ಹಿರಿ ತಲೆಗಳನ್ನು ಕಾಯುವುದು ಹೇಗೆ ಎಂಬ ಅಂಶಗಳು ಅದ್ಭುತವಾಗಿ ಹೆಣೆಯಲ್ಪಟ್ಟಿದೆ. ಸುಂದರ ಪರಿಸರವನ್ನು ಅನಂತ್ ಅರಸ್ ಸೆರೆಹಿಡಿದಿದ್ದಾರೆ. ದತ್ತಣ್ಣ ಅವರ ಅಭಿನಯದ ಶಕ್ತಿ ಕಾಣಲು ತಪ್ಪದೇ ಚಿತ್ರಮಂದಿರಕ್ಕೆ ಭೇಟಿ ಕೊಡಿ.