Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಪ್ರಾಣಾಪಾಯದಿಂದ ಪಾರು
ನಟ ದುನಿಯಾ ವಿಜಯ್ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆಯಲ್ಲಿ ಭರದಿಂದ ಸಾಗುತ್ತಿರುವ 'ಚಂಡ್ಯ' ಚಿತ್ರದ ಸಾಹಸ ಚಿತ್ರೀಕರಣ ವೇಳೆ ಈ ಘಟನೆ ಭಾನುವಾರ (ಜೂ.12) ಸಂಭವಿಸಿದೆ. ಈ ಒಂದು ಸಾಹಸ ಸನ್ನಿವೇಶದ ವೇಳೆ ಒಂಚೂರು ಮೈಮರೆತ್ತಿದ್ದರೂ ವಿಜಯ್ ತಲೆ ಅಥವಾ ಬೆನ್ನು ಮೂಳೆ ಮುರುದುಹೋಗುವ ಸಂಭವವಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ವಿಷಯ ಇಷ್ಟು ಸೀರಿಯಸ್ ಆಗಿದ್ದರೂ ದುನಿಯಾ ವಿಜಯ್ ಮಾತ್ರ ಹಗುರವಾಗಿ ತೆಗೆದುಕೊಂಡಿದ್ದಾರೆ. "ಚಿತ್ರೀಕರಣದ ವೇಳೆ ಸಾಕಷ್ಟು ಹೊಡೆತ ತಿಂದಿದ್ದೀನಿ. ಇದು ನನಗೆ ಅಭ್ಯಾಸವಾಗಿ ಹೋಗಿದೆ. ಈಗಲೂ ಕಾಲಿಗೆ ಪೆಟ್ಟುಬಿದ್ದು ಬ್ಯಾಂಡೇಜ್ ಕಟ್ಟಿಸಿಕೊಂಡಿದ್ದೇನೆ. ಯಾವುದೇ ಕಾರಣಕ್ಕೂ ಚಿತ್ರೀಕರಣ ನಿಲ್ಲಬಾರದು ಪಾಲ್ಗೊಂಡಿದ್ದೇನೆ" ಎಂದಿದ್ದಾರೆ ವಿಜಯ್.
ಮೂಲಗಳ ಪ್ರಕಾರ, ವಿಜಯ್ ಎಡಗಾಲಿಗೆ ಐದು ಹೊಲಿಗೆ ಹಾಕಲಾಗಿದೆ. ಆದರೂ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡು ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಸದ್ಯಕ್ಕೆ ನೋವು ನಿವಾರಕ ತೆಗೆದುಕೊಂಡಿದ್ದೇನೆ. ಚಿತ್ರೀಕರಣಕ್ಕೆ ಪ್ಯಾಕಪ್ ಹೇಳಿದರೆ ನಿರ್ಮಾಪಕ ನೋವು ಏನೂ ಎಂಬುದು ನನಗೆ ಗೊತ್ತು ಎಂದಿದ್ದಾರೆ ವಿಜಯ್. ಅಂದಹಾಗೆ 'ಭೀಮಾ ತೀರದಲ್ಲಿ' ಚಿತ್ರಕ್ಕೆ 'ಚಂಡ್ಯ' ಎಂದು ಮರುನಾಮಕರಣ ಮಾಡಲಾಗಿದೆ. (ದಟ್ಸ್ಕನ್ನಡ ಸಿನಿವಾರ್ತೆ)