Don't Miss!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬುಧವಾರ ರಾತ್ರಿ ಲ್ಯಾಂಡ್ ಆಗಲಿದ್ದಾರೆ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಬುಧವಾರ (ಜು.13) ಸಿಂಗಪುರದಿಂದ ಚೆನ್ನೈಗೆ ಆಗಮಿಸುತ್ತಿದ್ದಾರೆ. ಇಂದು ರಾತ್ರಿ(ಸುಮಾರು 10.30ಕ್ಕೆ)ವೇಳೆಗೆ ಅವರು ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಲಿದ್ದಾರೆ. ತನ್ನ ಅಭಿಮಾನಿ ದೇವರುಗಳನ್ನು ಏರ್ಪೋರ್ಟ್ನಲ್ಲೇ ಭೇಟಿ ಮಾಡಲಿದ್ದಾರೆ ಎಂದು ರಜನಿ ಅಭಿಮಾನಿಗಳ ಸಂಘ ಸಂದೇಶ ರವಾನಿಸಿದೆ.
ಅನಾರೋಗ್ಯದ ನಿಮಿತ್ತ ಅವರು ಚಿಕಿತ್ಸೆಗಾಗಿ ಸಿಂಗಪುರಕ್ಕೆ ಹೋಗಿದ್ದರು. ಅಲ್ಲಿ ಆರು ವಾರುಗಳ ಕಾಲ ಚಿಕಿತ್ಸೆ ಪಡೆದು ಈಗ ಸ್ವದೇಶಕ್ಕೆ ಆಗಮಿಸುತ್ತಿದ್ದಾರೆ. ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದರು. ಈಗ ರಜನಿ ಸಂಪೂರ್ಣ ಗುಣಮುಖರಾಗಿದ್ದು 'ರಾಣಾ' ಚಿತ್ರಕ್ಕೆ ಬಣ್ಣಹಚ್ಚಿಕೊಳ್ಳಲು ಸಿದ್ಧರಾಗಿದ್ದಾರೆ.
ರಜನಿಯನ್ನು ನೋಡಲು ಅವರ ಅಪಾರ ಅಭಿಮಾನಿಗಳು ಚೆನ್ನೈನತ್ತ ದೌಡಾಯಿಸಿದ್ದಾರೆ. ಆದರೆ ಖಾಸಗಿ ವಾಹನಗಳಲ್ಲಿ ಬರದೆ, ಸರ್ಕಾರಿ ಬಸ್ಸು ಅಥವಾ ರೈಲುಗಳಲ್ಲಿ ಬರಲು ರಜನಿ ಅವರ ಧರ್ಮಪತ್ನಿ ಲತಾ ಅವರು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ರಜನಿ ಆಗಮನದ ಹಿನ್ನೆಲೆಯಲ್ಲಿ ಚೆನ್ನೈ ಏರ್ಪೋರ್ಟ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಕಲ್ಪಿಸಲಾಗಿದೆ. (ಏಜೆನ್ಸೀಸ್)