Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಸುಗಾರ ರವಿಚಂದ್ರನ್ ಜೊತೆ ಮೋಹಿನಿ ಸದಾ
ಶಿವರಾಜ್ ಕುಮಾರ್ ಅವರ 99ನೇ ಚಿತ್ರ 'ಮೈಲಾರಿ' ಹಾಗೂ ಇಂದ್ರಜಿತ್ ಲಂಕೇಶ್ ಅವರ 'ಹುಡುಗ ಹುಡುಗಿ' ಚಿತ್ರಗಳನ್ನು ಮುಗಿಸಿರುವ ಸದಾ ಮೊಹಮ್ಮದ್ ಸಯೀದ್(ಸದಾ ಎಂದೇ ಖ್ಯಾತ) ಈಗ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈಗಾಗಲೆ ಭರದಿಂದ ಚಿತ್ರೀಕರಣ ಸಾಗಿರುವ ಕ್ರೇಜಿ ಸ್ಟಾರ್ 'ಮಲ್ಲಿಕಾರ್ಜುನ' ಚಿತ್ರವನ್ನು ಒಪ್ಪಿಕೊಂಡಿದ್ದಾರೆ.
ಮುಂಬೈ ಮೂಲದ ಈ ಬೆಡಗಿ ಆರಂಭದಲ್ಲಿ ತೆಲುಗು ಚಿತ್ರರಂಗದಲ್ಲಿ ಮಿಂಚಿದರು. ಬಳಿಕ ತಮಿಳು, ಮಲಯಾಳಂ ಚಿತ್ರರಂಗದಲ್ಲೂ ಒಂದು ಸುತ್ತುಹಾಕಿಕೊಂಡು ಬಂದರು. ಈಗ ಕನ್ನಡ ಚಿತ್ರರಂಗದಲ್ಲಿ ಒಂದು ಕೈ ನೋಡುತ್ತಿದ್ದಾರೆ. ಸೆಪ್ಟೆಂಬರ್ 15ರಿಂದ ಮೈಸೂರಿನಲ್ಲಿ ಸದಾ ಮತ್ತು ರವಿಚಂದ್ರನ್ ಭಾಗದ ಚಿತ್ರೀಕರಣ ನಡೆಯಲಿದೆ.
ಉಪೇಂದ್ರ ಅಭಿನಯದ 'ನಾಗರ ಹಾವು' ಹಾಗೂ ಶಿವರಾಜ್ ಕುಮಾರ್ ಅಭಿನಯ 'ಸಂತ' ಚಿತ್ರಗಳನ್ನು ನಿರ್ದೇಶಿಸಿದ್ದ ಮುರಳಿ ಈ ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ದ್ವಿಪಾತ್ರದಲ್ಲಿ ಕಾಣಿಸಲಿದ್ದಾರೆ. ದಿನೇಶ್ ಗಾಂಧಿ ನಿರ್ಮಿಸುತ್ತಿರುವ ಚಿತ್ರದ ತಾರಾಬಳಗದಲ್ಲಿ ರವಿಚಂದ್ರನ್, ಸೀತಾ, ರಾಗಿಣಿ, ಸುದೀಪ್ತೋ, ಆಶೀಷ್ವಿದ್ಯಾರ್ಥಿ, ಹೇಮಾಚೌಧರಿ, ಆದಿ ಲೋಕೇಶ್, ಎಂ.ಎನ್.ಲಕ್ಷ್ಮೀದೇವಿ, ರಾಜುತಾಳಿಕೋಟೆ, ದಿನೇಶ್ಗಾಂಧಿ ಮುಂತಾದವರ ಅಭಿನಯವಿದೆ.