Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ತಾರಾ
ತಾರಾ ಅವರ ಜೊತೆ ಮತ್ತೊಬ್ಬ ಖ್ಯಾತ ತಾರೆ 'ಗಿರಿಕನ್ಯೆ' ಜಯಮಾಲಾ ಅವರ ಹೆಸರು ಕೂಡ ಕೇಳಿ ಬಂದಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿರುವ ಅವರ ಹೆಸರು ಮುಂಚೂಣಿಯಲ್ಲಿತ್ತು. ಅಂತಿಮವಾಗಿ ತಾರಾ ಅವರಿಗೆ ಈ ಪಟ್ಟ ಒಲಿದಿದೆ.
ಈ ಹುದ್ದೆಗೆ ಅನುರಾಧಾ ಅಲಿಯಾಸ್ ತಾರಾ ಅವರು ನಿಜಕ್ಕೂ ಅರ್ಹ ವ್ಯಕ್ತಿ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯದ ಮುಖಾಂತರ ಚಿತ್ರರಸಿಕರ ಮನ ಗೆದ್ದಿರುವ ತಾರಾ ಅವರು ರಂಗದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ ಮತ್ತು ಚಿತ್ರರಂಗದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಪಿ. ಶೇಷಾದ್ರಿಯವರ ಹಸೀನಾ ಚಿತ್ರದಲ್ಲಿ ನೀಡಿದ ಅದ್ಭುತ ಅಭಿನಯಕ್ಕಾಗಿ 2005ರಲ್ಲಿ ತಾರಾ ಅವರು ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿ ಕೂಡ ಪಡೆದಿದ್ದಾರೆ.
ಎರಡು ದಶಕಗಳ ಕಾಲ ಚಿತ್ರರಂಗದಲ್ಲಿ ದುಡಿದಿರುವ ತಾರಾ ಅವರು ಕನ್ನಡವಲ್ಲದೆ ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲಿ ಕೂಡ ಅಭಿನಯ ಚಾತುರ್ಯವನ್ನು ಮೆರೆದಿದ್ದಾರೆ. ಆರಂಭದಲ್ಲಿ ಅಕ್ಕ ತಂಗಿಯ ಪಾತ್ರಗಳನ್ನೇ ಮಾಡುತ್ತಿದ್ದ ತಾರಾ ಅವರಿಗೆ ಉತ್ತಮ ಬ್ರೇಕ್ ನೀಡಿದ ಚಿತ್ರ ಕಾನೂರು ಹೆಗ್ಗಡತಿ. ಆ ಚಿತ್ರದ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಲಭಿಸಿತು. ಸೈನೈಡ್, ದಿ ಇನ್ ಸೈಡ್ ಸ್ಟೋರಿ ಚಿತ್ರ ಕೂಡ ಅವರಿಗೆ ಉತ್ತಮ ಹೆಸರು ತಂದು ಕೊಟ್ಟಿತು. ಸದ್ಯಕ್ಕೆ ಅವರು ರಾಜಕಾರಣಿಯಾಗಿಯೂ ಮಿಂಚುತ್ತಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ)ಯನ್ನು ಸೇರಿದ್ದಾರೆ.