ಚಿತ್ರೀಕರಣದಲ್ಲೇ ಶತದಿನ ಕಂಡ ವೀರ ಮದಕರಿ!
ವೀರ ಮದಕರಿ

ಎಸ್.ಎಸ್.ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸುದೀಪ್ ನಿರ್ದೇಶಿಸುತ್ತಿದ್ದಾರೆ. ಕೀರವಾಣಿ ಸಂಗೀತವಿರುವ 'ವೀರ ಮದಕರಿ'ಗೆ ಶ್ರೀವೆಂಕಟ್ ಅವರ ಛಾಯಾಗ್ರಹಣವಿದೆ. ವಿಜಯಪ್ರಸಾದ್ ಕತೆ, ರವಿರಾಜ್ ಸಂಭಾಷಣೆ, ಸುರೇಶ್ರಾಜ್ ಸಹನಿರ್ದೇಶನ ಹಾಗೂ ಕೆ.ವಿ.ಮಂಜಯ್ಯ ಅವರ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಸುದೀಪ್, ಪವಿತ್ರ, ರಹಿಣಿ, ದಿನೇಶ್ಗಾಂಧಿ, ದೊಡ್ಡಣ್ಣ ಟೆನ್ನಿಸ್ಕೃಷ್ಣ ಮುಂತಾದವರಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್ ವಿಶೇಷ ಪಾತ್ರದಲಿದ್ದಾರೆ.
ಕಲಾಕಾರ್

ದಿ ಬೆಂಗಳೂರು ಕಂಪನಿ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕತೆ, ಚಿತ್ರಕತೆ ಬರೆದಿದ್ದಾರೆ. ಗಿರಿಧರ್ ದಿವಾನ್ ಸಂಗೀತ, ಎಚ್.ಎಂ.ರಾಮಚಂದ್ರ ಛಾಯಾಗ್ರಹಣ, ಶ್ರೀ(ಕ್ರೇಜಿ ಮೈಂಡ್ಸ್) ಸಂಕಲನವಿರುವ ಚಿತ್ರದ ತಾರಾಬಳಗದಲ್ಲಿ ಹರೀಶ್ರಾಜ್, ಸುಮನ್ರಂಗನಾಥ್, ರಾಧಿಕಾಗಾಂಧಿ, ಸುಧಾನರಸಿಂಹರಾಜು, ಅವಿನಾಶ್(ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ), ರಾಜರಾವ್, ವಿಶ್ವ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೂರಕ ಓದಿಗೆ
ವೀರ ಮದಕರಿ ಶೀರ್ಷಿಕೆ ವಿವಾದಕ್ಕೆ ಮತ್ತೆ ಜೀವ
ಚೋರ ಗುರು ಮದಕರಿಗೆ ಸಿಕ್ತು ಗೋದಾಮು


Click it and Unblock the Notifications











