Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಕಾವೇರಿ’ಸಿದ ಕನ್ನಡ ಚಿತ್ರೋದ್ಯಮ.. ಅಂಬಿ ನಾಪತ್ತೆ!
ಕಾವೇರಿ ನ್ಯಾಯಮಂಡಳಿ ತೀರ್ಪನ್ನು ಪ್ರತಿಭಟಿಸಿ ನಡೆದ ಚಿತ್ರೋದ್ಯಮದ ಬೃಹತ್ ಮೆರವಣಿಗೆಯಲ್ಲಿ ವಿಷ್ಣುವರ್ಧನ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್, ತಾರಾ, ಮಾಲಾಶ್ರೀ, ಜಯಂತಿ ಮತ್ತಿತರ ನಟ-ನಟಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು, ಹಂಚಿಕೆದಾರರು ಸೇರಿದಂತೆ ಅನೇಕರು ಹಾಜರಿದ್ದರು. ಶಕ್ತಿಪ್ರದರ್ಶನದಂತೆ ಕಂಡು ಬಂದ ಚಿತ್ರೋದ್ಯಮದ ಮೆರವಣಿಗೆ, ತನ್ನ ಒಗ್ಗಟ್ಟನ್ನು ಪ್ರದರ್ಶಿಸಿತು. ನಾಡಿಗೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ ಎಂಬ ಸಂದೇಶವನ್ನು ರವಾನಿಸಿತು.
ರಾಜಭವನಕ್ಕೆ ಮೆರವಣಿಗೆ ಮೂಲಕ ತೆರಳಿದ ಚಿತ್ರೋದ್ಯಮದ ಪ್ರಮುಖರು ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ನಾಡಿಗಾದ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿದರು. 3000ಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು 2000 ಪೊಲೀಸರು ಶಾಂತಿಸುವ್ಯವಸ್ಥೆ ಕಾರ್ಯ ನಿರ್ವಹಿಸಿದರು.
ಕಾವೇರಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಯಲಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ತಲ್ಲಂ ನಂಜುಂಡ ಶೆಟ್ಟಿ ಈ ಸಂದರ್ಭದಲ್ಲಿ ಸ್ಪಷ್ಪಪಡಿಸಿದ್ದಾರೆ. ಪ್ರತಿಭಟನಾ ಮೆರವಣಿಗೆಯಿಂದಾಗಿ ಇಂದು ಮಧ್ಯಾಹ್ನದ ವರೆಗೆ ರೇಸ್ ಕೋರ್ಸ್ ರಸ್ತೆ, ಕುಮಾರ ಕೃಪಾ ಮತ್ತು ರಾಜಭವನದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಅಂಬರೀಷ್
ಗೈರು
ಹಾಜರಿ
ಎದ್ದು
ಕಾಣುತ್ತಿತ್ತು.
(ಯುಎನ್ಐ)