Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಅವಾಂತರ : ಹಿಂಸೆ, ವಾಹನಗಳಿಗೆ ಬೆಂಕಿ
ಬೆಂಗಳೂರು : ವರನಟನನ್ನು ಕಳೆದುಕೊಂಡು ಶೋಕತಪ್ತರಾಗಿರುವ ಅಭಿಮಾನಿಗಳು ಒಂದು ಕಡೆಯಾದರೆ, ರೊಚ್ಚಿಗೆದ್ದ ಅಭಿಮಾನಿ ದೇವರುಗಳು ಇನ್ನೊಂದೆಡೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಹಿಂಸೆಗೆ ತಿರುಗಿದೆ.
ಸುಮಾರು 50ಕ್ಕೂ ಅಧಿಕ ಬಿಎಂಟಿಸಿ ಬಸ್ಗಳು, 20ಕ್ಕೂ ಅಧಿಕ ಕೆಎಸ್ಆರ್ಟಿಸಿ ಬಸ್ಗಳು, 17 ಪೊಲೀಸ್ ವಾಹನಗಳು ಸೇರಿದಂತೆ ನೂರಾರು ವಾಹನಗಳು ಉದ್ರಿಕ್ತರ ಆಕ್ರೋಶಕ್ಕೆ ಬುಧವಾರ ಬಲಿಯಾಗಿವೆ. ಕೋಟ್ಯಂಟರ ರೂ. ಸಾರ್ವಜನಿಕ ನಷ್ಟ ಸಂಭವಿಸಿದೆ.
ಕಂಠೀರವ ಕ್ರೀಡಾಂಗಣದಲ್ಲಿ ರಾಜ್ ಪಾರ್ಥಿವ ಶರೀರವನ್ನು ವೀಕ್ಷಿಸಲು ಅವಕಾಶ ಲಭ್ಯವಾಗದ ಕಾರಣ ಅಭಿಮಾನಿಗಳ ಗುಂಪು ಅಸಮಾಧಾನಗೊಂಡಿದ್ದು, ಹಿಂಸೆಗೆ ಕಾರಣ ಎನ್ನಲಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಾಗ ಲಘು ಲಾಠಿ ಪ್ರಹಾರದ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.
ಈ ಗಲಭೆಯಲ್ಲಿ ಹದಿನೈದು ಪೊಲೀಸರು ಗಾಯಗೊಂಡಿದ್ದು, ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗಿಸಲಾಯಿತು. ಸುಮಾರು 50ಕ್ಕೂ ಅಧಿಕ ಮಂದಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಕ್ರೀಡಾಂಗಣದ ಬಳಿಯಿದ್ದ ಪೆಟ್ರೋಲ್ ಬಂಕ್, ತನ್ನ ವಹಿವಾಟನ್ನು ಸ್ಥಗಿತಗೊಳಿಸಲಿಲ್ಲವೆಂದು ಬೆಂಕಿ ಹಚ್ಚಿದ ಪ್ರಕರಣವೂ ವರದಿಯಾಗಿದೆ.
ಕಂಠೀರವ ಕ್ರೀಡಾಂಗಣದಲ್ಲಿ ರಾಜ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್