Don't Miss!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲ್ಲೂರಿನಲ್ಲಿ ಇಳಯರಾಜ ಅವರ ಪುತ್ರಿಯ ಕಲ್ಯಾಣೋತ್ಸವ
ಮಂಗಳೂರು : ಹೆಸರಾಂತ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಸಂಗೀತ ನಿರ್ದೇಶಕಿ ಮತ್ತು ನಟಿ ಭಾವತಾರಿಣಿ ಇಳಯರಾಜ ಅವರ ವಿವಾಹ ಮಹೋತ್ಸವ ಸೆ.16ರಂದು ಕೊಲ್ಲೂರಿನಲ್ಲಿ ನೆರವೇರಲಿದೆ.
ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳ ಚಲನಚಿತ್ರಗಳಿಗೆ ಸಂಗೀತ ನೀಡಿ ಪ್ರಖ್ಯಾತರಾಗಿರುವ ಇಳಯರಾಜ ಅವರ ಪುತ್ರಿಯ ವಿವಾಹ ಸಮಾರಂಭಕ್ಕೆ ಉತ್ತರ ಮತ್ತು ದಕ್ಷಿಣ ಭಾರತದ ಸಿನಿ ದಿಗ್ಗಜರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಶ್ರೀಕ್ಷೇತ್ರದಲ್ಲಿ ಪೊಲೀಸರು ಬಿಗಿ ಬಂದೋಬಸ್ತು ಮಾಡಿದ್ದಾರೆ. ಭಾವತಾರಿಣಿ ಅವರು ಮದುರೈನ ಸಬರಿ ರಾಜನ್ರನ್ನು ವರಿಸಲಿದ್ದಾರೆ.
ಕೊಲ್ಲೂರು ದೇವಸ್ಥಾನದ ಪರಮಭಕ್ತರಾದ ಇಳಯರಾಜ ಇತ್ತೀಚೆಗಷ್ಟೇ ದೇವಿಗೆ 30ಲಕ್ಷ ರೂ. ಮೌಲ್ಯದ ವಜ್ರಸಹಿತವಾದ ಚಿನ್ನದ ಆಭರಣವನ್ನು ಕಾಣಿಕೆಯಾಗಿ ನೀಡಿದ್ದರು. ಇಳಯರಾಜ ಅವರ ಪುತ್ರಿ ಭಾವತಾರಿಣಿ ಶಾಸ್ತ್ರೀಯ ಸಂಗೀತದಲ್ಲಿ ಸಿದ್ಧಹಸ್ತರು. ಸಂಗೀತ ನಿರ್ದೇಶಕಿಯಾಗಿ ಮತ್ತು ನಟಿಯಾಗಿ ಅವರು ಗುರ್ತಿಸಿಕೊಂಡಿದ್ದಾರೆ.
ನಟಿ ಊರ್ವಶಿ ಮತ್ತು ಕೆ.ಮನೋಜ್ ಅವರ ವಿವಾಹ ಮಹೋತ್ಸವ ಕಳೆದ ಕೆಲವು ವರ್ಷಗಳ ಹಿಂದೆ ಕೊಲ್ಲೂರಿನಲ್ಲಿ ನಡೆದ ಘಟನೆ ಸ್ಥಳೀಯರಲ್ಲಿ ಹಚ್ಚಹಸಿರಾಗಿದೆ. ಸ್ಟಾರ್ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿಯ ವಿವಾಹದ ಹಿನ್ನೆಲೆ ಕೊಲ್ಲೂರು ಮತ್ತೆ ರಂಗು ಪಡೆಯಲಿದೆ.
(ಏಜನ್ಸೀಸ್)
ಮುಖಪುಟ / ಸ್ಯಾಂಡಲ್ವುಡ್