ಸ್ವಯಂಕೃಷಿ ಮೂಲಕ ಕನ್ನಡಕ್ಕೆ ಹಿಂತಿರುಗಿದ ಚರಣ್ ರಾಜ್

By Rajendra

ಸುದೀರ್ಘ ಸಮಯದ ಬಳಿಕ ಖ್ಯಾತ ನಟ ಚರಣ್ ರಾಜ್ ಕನ್ನಡಕ್ಕೆ ಮರಳಿದ್ದಾರೆ. ಈಗಾಗಲೆ ಸಾಕಷ್ಟು ಪ್ರಚಾರ ಪಡೆದಿರುವ 'ಸ್ವಯಂಕೃಷಿ' ಚಿತ್ರದಲ್ಲಿ ಚರಣ್ ರಾಜ್ ಅವರು ಗಮನಾರ್ಹ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚರಣ್ ರಾಜ್ ಕನ್ನಡಲ್ಲಿ ಅಭಿನಯಿಸಿದ ಕೊನೆಯ ಚಿತ್ರ 'ತಿರುಪತಿ'.

ಚರಣ್ ರಾಜ್ ತಮ್ಮದೇ ಆದಂತಹ ವಿಶಿಷ್ಟ ಮ್ಯಾನರಿಜಂಗೆ ಹೆಸರಾದವರು. ನಾಯಕ ಪ್ರಧಾನ ಪಾತ್ರಗಳಿಗಿಂತ ಹೆಚ್ಚಾಗಿ ಖಳನಟನಾಗಿ ಗುರುತಿಸಿಕೊಂಡಿದ್ದಾರೆ. ಈಗ 'ಸ್ವಯಂಕೃಷಿ' ಚಿತ್ರದಲ್ಲಿ ಅಂತಹದ್ದೇ ಒಂದು ಗಮನಾರ್ಹ ಪಾತ್ರದಲ್ಲಿ ಕಾಣಿಸುತ್ತಿದ್ದಾರೆ. ತೆಲುಗು, ತಮಿಳಿನಲ್ಲಿ ಸಖತ್ ಬ್ಯುಸಿಯಾಗಿದ್ದ ಚರಣ್ ರಾಜ್‌ರನ್ನು ಕಡೆಗೂ ಕನ್ನಡಕ್ಕೆ ಕರೆತರುವ ಸಾಹಸ ಮಾಡಿದವರು ಚಿತ್ರದ ನಿರ್ದೇಶಕ ವೀರೇಂದ್ರ ಬಾಬು.

'ಸ್ವಯಂಕೃಷಿ'ಗೆ ಸಂಬಂಧಿಸಿದಂತೆ ಮತ್ತೊಂದು ಕುತೂಹಲ ಸಂಗತಿಯಿದೆ. "ಶ್ರೀಮನ್ ನಾರಾಯಣಾ ನಿನ್ನ ಹುಂಡಿ ದಯಪಾಲಿಸೋ ಗೋವಿಂದ" ಎಂಬ ಗೀತೆಯನ್ನು ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ಬರೆದಿದ್ದಾರೆ. ಇತ್ತೀಚೆಗೆ ಈ ಗೀತೆಯ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಮುರಳಿ ನೃತ್ಯ ಸಂಯೋಜಿಸಿದ ಈ ಹಾಡಿನ ಚಿತ್ರೀಕರಣದಲ್ಲಿ ವೀರೇಂದ್ರಬಾಬು, ಜನಾರ್ದನ್, ವಿಜಯ್‌ಚೆಂಡೂರ್ ಹಾಗೂ ರಷ್ಯನ್ ನರ್ತಕಿಯರು ಭಾಗವಹಿಸಿದ್ದರು.

ವೀರೇಂದ್ರಬಾಬು 'ಸ್ವಯಂಕೃಷಿ' ಚಿತ್ರದ ನಾಯಕ ನಟ. ತಮನ, ಜೀವನ್, ವಿಜಯ್‌ಚೆಂಡೂರ್, ಜನಾರ್ದನ್, ಉಮಾಶ್ರೀ, ರಂಗಾಯಣರಘು, ಕೃಷ್ಣೇಗೌಡ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಟನೆಯ ಜೊತೆಗೆ ಈ ಚಿತ್ರವನ್ನು ವೀರೇಂದ್ರ ಬಾವು ನಿರ್ಮಿಸಿ, ನಿರ್ದೇಶಿಸಿದ್ದಾರೆ.

More from Filmibeat

English summary
Renowned actor Chran Raj back to Kannada films. He is doing significant role in Kannada movie Swayamkrishi. The movie is directing, producing and acting by Veerendra Babu. Actress Umashree, Rangayana Raghu, Krishnegowda are in cast.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X