Don't Miss!
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿವೀರ, ಗಾಡ್ ಫಾದರ್ಗೆ ಫಿಲಂ ಚೇಂಬರ್ ತೀರ್ಪು
ಚಲನಚಿತ್ರ ನಿರ್ಮಾಪಕರರಾದ ಮುನಿರತ್ನ ಹಾಗೂ ಕೆ ಮಂಜು ನಡುವಿನ ವಿವಾದಕ್ಕೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಈ ಪರಿಹಾರ ನೀಡಿರುವುದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ. ಅದೇನೆಂದರೆ ಯಾರ ಚಿತ್ರ ಮೊದಲು ಸೆನ್ಸಾರ್ ಸರ್ಟಿಫಿಕೇಟ್ ಪಡೆಯುತ್ತದೋ ಅವರ ಚಿತ್ರವೇ ಮೊದಲು ಬಿಡುಗಡೆಯಾಗಲಿ ಎಂದು ಫಿಲಂ ಚೇಂಬರ್ ತೀರ್ಪು ನೀಡಿದೆ.
ಮೊದಲು ಸೆನ್ಸಾರ್ ಆದ ಚಿತ್ರ ಮೊದಲು ಬಿಡುಗಡೆಯಾಗಲಿ. ನಂತರ ಸೆನ್ಸಾರ್ ಆದ ಚಿತ್ರ ನಾಲ್ಕು ವಾರಗಳ ಬಳಿಕ ಬಿಡುಗಡೆಯಾಗಲಿ ಎಂದಿದೆ ಫಿಲಂ ಚೇಂಬರ್. ಈ ಮೂಲಕ 'ಕಠಾರಿವೀರ ಸುರಸುಂದರಾಂಗಿ' ಹಾಗೂ 'ಗಾಡ್ ಫಾದರ್' ಚಿತ್ರಗಳ ವಿವಾದ ಸದ್ಯಕ್ಕೆ ತಣ್ಣಗಾಗಿದೆ.
'ಕಠಾರಿವೀರ' ಚಿತ್ರದ ನಿರ್ಮಾಪಕ ಮುನಿರತ್ನ ಹಾಗೂ 'ಗಾಡ್ ಫಾದರ್' ಚಿತ್ರದ ಕೆ ಮಂಜು ಅವರು ತಮ್ಮ ಚಿತ್ರಗಳನ್ನು ಏ.27ರಂದೇ ಬಿಡುಗಡೆ ಮಾಡಬೇಕು ಎಂದು ಪಟ್ಟುಹಿಡಿದಿದ್ದರು. ಉಪೇಂದ್ರ ಅಭಿನಯದ ಈ ಎರಡೂ ಚಿತ್ರಗಳು ಒಂದೇ ದಿನ ಬಿಡುಗಡೆಯಾದರೆ ಅತ್ತ ನಿರ್ಮಾಪಕರಿಗೆ ನಷ್ಟ ಇತ್ತ ಪ್ರೇಕ್ಷಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. (ಒನ್ಇಂಡಿಯಾ ಕನ್ನಡ)