Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಿಯಾಲಿಟಿ ಶೋಗಳತ್ತ ಚಿತ್ತ ಹರಿಸಿದ ಕಿರಣ್ ರಾವ್
ಈಗಾಗಲೆ 'ಧೋಬಿ ಘಾಟ್' ಎಂಬ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಸುದ್ದಿ ಮಾಡಿರುವ ಅಮೀರ್ ಖಾನ್ ಪತ್ನಿ ಕಿರಣ್ ರಾವ್ ಈಗ ಏಕಾಏಕಿ ರಿಯಾಲಿಟಿ ಶೋಗಳ ಕಡೆಗೆ ಚಿತ್ತ ಹರಿಸಿದ್ದಾರೆ. ಹಾಗಂತ ಅವರು ಯಾವುದೇ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿಲ್ಲ. ರಿಯಾಲಿಟಿ ಶೋಗಳ ಹಿಂದಿನ ಮರ್ಮವನ್ನು ತೆರೆಗೆ ತರುವ ಸಿದ್ಧತೆಯಲ್ಲಿದ್ದಾರೆ.
ಅವರ ಈ ಹೊಸ ಚಿತ್ರಕ್ಕೆ ಸ್ಫೂರ್ತಿಯಾದವರು ರಿಯಾಲಿಟಿ ಶೋಗಳ ರಾಣಿ ರಾಖಿ ಸಾವಂತ್! 'ರಾಖಿ ಕಾ ಇನ್ಸಾಫ್' ರಿಯಾಲಿಟಿ ಶೋನಲ್ಲಿ ರಾಖಿ ಸಾವಂತ್ ಸ್ಪರ್ಧಿಯೊಬ್ಬನಿಗೆ ನಾಮರ್ದ ಎಂದು ಜರಿದ ಕಾರಣ ಆತ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆಯೇ ಚಿತ್ರವೊಂದನ್ನು ಮಾಡಲು ಪ್ರೇರೇಪಿಸಿತು ಎಂದಿದ್ದಾರೆ ಕಿರಣ್.
ಮಾನವೀಯ ಸಂಬಂಧಗಳು, ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳ ಮನಸ್ಥಿತಿ, ಅವರ ಭಾವನಾತ್ಮಕ ಸಂಬಂಧಗಳನ್ನು ತೆರೆಗೆ ತರುವ ಪ್ರಯತ್ನವನ್ನು ಅವರು ಮಾಡಲಿದ್ದಾರೆ. ಅಂದಹಾಗೆ 'ಧೋಬಿ ಘಾಟ್' ಚಿತ್ರ ಫೆಬ್ರವರಿ 11ಕ್ಕೆ ತೆರೆಕಾಣುತ್ತಿದೆ. ಆ ಚಿತ್ರ ತೆರೆಕಂಡ ಬಳಿಕ ರಿಯಾಲಿಟಿ ಶೋಗಳ ಕುರಿತ ಚಿತ್ರದ ಕಡೆಗೆ ಕಿರಣ್ ರಾವ್ ಚಿತ್ತ ಹರಿಯಲಿದೆ.