Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾಲಿಟಿ ಶೋಗಳತ್ತ ಚಿತ್ತ ಹರಿಸಿದ ಕಿರಣ್ ರಾವ್
ಈಗಾಗಲೆ 'ಧೋಬಿ ಘಾಟ್' ಎಂಬ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಸುದ್ದಿ ಮಾಡಿರುವ ಅಮೀರ್ ಖಾನ್ ಪತ್ನಿ ಕಿರಣ್ ರಾವ್ ಈಗ ಏಕಾಏಕಿ ರಿಯಾಲಿಟಿ ಶೋಗಳ ಕಡೆಗೆ ಚಿತ್ತ ಹರಿಸಿದ್ದಾರೆ. ಹಾಗಂತ ಅವರು ಯಾವುದೇ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿಲ್ಲ. ರಿಯಾಲಿಟಿ ಶೋಗಳ ಹಿಂದಿನ ಮರ್ಮವನ್ನು ತೆರೆಗೆ ತರುವ ಸಿದ್ಧತೆಯಲ್ಲಿದ್ದಾರೆ.
ಅವರ ಈ ಹೊಸ ಚಿತ್ರಕ್ಕೆ ಸ್ಫೂರ್ತಿಯಾದವರು ರಿಯಾಲಿಟಿ ಶೋಗಳ ರಾಣಿ ರಾಖಿ ಸಾವಂತ್! 'ರಾಖಿ ಕಾ ಇನ್ಸಾಫ್' ರಿಯಾಲಿಟಿ ಶೋನಲ್ಲಿ ರಾಖಿ ಸಾವಂತ್ ಸ್ಪರ್ಧಿಯೊಬ್ಬನಿಗೆ ನಾಮರ್ದ ಎಂದು ಜರಿದ ಕಾರಣ ಆತ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆಯೇ ಚಿತ್ರವೊಂದನ್ನು ಮಾಡಲು ಪ್ರೇರೇಪಿಸಿತು ಎಂದಿದ್ದಾರೆ ಕಿರಣ್.
ಮಾನವೀಯ ಸಂಬಂಧಗಳು, ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳ ಮನಸ್ಥಿತಿ, ಅವರ ಭಾವನಾತ್ಮಕ ಸಂಬಂಧಗಳನ್ನು ತೆರೆಗೆ ತರುವ ಪ್ರಯತ್ನವನ್ನು ಅವರು ಮಾಡಲಿದ್ದಾರೆ. ಅಂದಹಾಗೆ 'ಧೋಬಿ ಘಾಟ್' ಚಿತ್ರ ಫೆಬ್ರವರಿ 11ಕ್ಕೆ ತೆರೆಕಾಣುತ್ತಿದೆ. ಆ ಚಿತ್ರ ತೆರೆಕಂಡ ಬಳಿಕ ರಿಯಾಲಿಟಿ ಶೋಗಳ ಕುರಿತ ಚಿತ್ರದ ಕಡೆಗೆ ಕಿರಣ್ ರಾವ್ ಚಿತ್ತ ಹರಿಯಲಿದೆ.