Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಹಿರಿಯ ನಟ ಕೆ ಎಸ್ ಅಶ್ವತ್ಥ್ ಅಸ್ವಸ್ಥ
ಮೆದುಳಿಗೆ ರಕ್ತ ಪೂರೈಕೆ ನಿಧಾನಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ. ಅಶ್ವತ್ಥ್ ಅವರ ಮಗ ಶಂಕರ್ ಅಶ್ವಥ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಅಶ್ವತ್ಥ್ ಅವರು ಯಾರನ್ನು ಗುರುತಿಸುತ್ತಿಲ್ಲ. ಕಿವಿಬಳಿ ಮಾತನಾಡಿದರೆ ಮಾತ್ರ ಒಂಚೂರು ಪ್ರತಿಕ್ರಿಯಿಸುತ್ತಾರೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಿಂದ ಅಶ್ವತ್ಥ್ ಅವರು ಅನಾರೋಗ್ಯದಿಂದ ಬಳಸುತ್ತಿದ್ದರು. ಹಾಗಾಗಿ ಇತ್ತೀಚೆಗೆ ಅವರು ಯಾವುದೇ ಚಿತ್ರಗಳಲ್ಲಿ ಅಭಿನಯಿಸುತ್ತಿರಲಿಲ್ಲ. ಮೈಸೂರಿನ ಸರಸ್ವತಿಪುರಂನ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಆಗಾಗ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಬಸಪ್ಪ ಸ್ಮಾರಕ ಆಸ್ಪತ್ರೆಯ ಹೃದಯ ತಜ್ಞ ಡಾ.ಜನಾರ್ದನ ಅವರು ಅಶ್ವತ್ಥ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಾಹಸಸಿಂಹ ವಿಷ್ಣುವರ್ಧನ್ ಅವರು ನಿಧನರಾದಾಗ ಅಶ್ವತ್ಥ್ ಅವರು ಮಾನಸಿಕವಾಗಿ ಬಹಳಷ್ಟು ನೊಂದುಕೊಂಡಿದ್ದರು. ಇದೇ ಯೋಚನೆಯಲ್ಲಿ ಆ ಹಿರಿಯ ಜೀವ ಮಂಕಾಗಿ ಹೋಗಿದ್ದರು.
ಈ ನಡುವೆ ಅಶ್ವತ್ಥ್ ಅವರ ಚಿಕಿತ್ಸೆಯ ವೆಚ್ಚವನ್ನು ಭರಿಸಲು ರಾಜ್ಯ ಸರಕಾರ ಮುಂದೆ ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ರು.1 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಜಯಮಾಲಾ ಹಾರೈಸಿದ್ದಾರೆ.
ಇತ್ತೀಚೆಗಷ್ಟೆ ಅಶ್ವತ್ಥ್ ಅವರು ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಬಂದಿದ್ದರು. ವೀಲ್ ಚೇರ್ ನಲ್ಲಿ ಕುಳಿತು ಕಾಶಿ, ಅಲ್ಲಿನ ಗಂಗಾ ಘಾಟ್ ಗಳನ್ನು ನೋಡಿ ಅಶ್ವತ್ಥ್ ಆನಂದಿಸಿದ್ದರು. ಕಾಶಿಯಿಂದ ಹಿಂತಿರುಗಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು ಎನ್ನುತ್ತಾರೆ ಅಶ್ವಥ್ ಅವರ ಸೊಸೆ ಸುಧಾ.