Don't Miss!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಹಿರಿಯ ನಟ ಕೆ ಎಸ್ ಅಶ್ವತ್ಥ್ ಅಸ್ವಸ್ಥ
ಮೆದುಳಿಗೆ ರಕ್ತ ಪೂರೈಕೆ ನಿಧಾನಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ. ಅಶ್ವತ್ಥ್ ಅವರ ಮಗ ಶಂಕರ್ ಅಶ್ವಥ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಅಶ್ವತ್ಥ್ ಅವರು ಯಾರನ್ನು ಗುರುತಿಸುತ್ತಿಲ್ಲ. ಕಿವಿಬಳಿ ಮಾತನಾಡಿದರೆ ಮಾತ್ರ ಒಂಚೂರು ಪ್ರತಿಕ್ರಿಯಿಸುತ್ತಾರೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಿಂದ ಅಶ್ವತ್ಥ್ ಅವರು ಅನಾರೋಗ್ಯದಿಂದ ಬಳಸುತ್ತಿದ್ದರು. ಹಾಗಾಗಿ ಇತ್ತೀಚೆಗೆ ಅವರು ಯಾವುದೇ ಚಿತ್ರಗಳಲ್ಲಿ ಅಭಿನಯಿಸುತ್ತಿರಲಿಲ್ಲ. ಮೈಸೂರಿನ ಸರಸ್ವತಿಪುರಂನ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಆಗಾಗ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಬಸಪ್ಪ ಸ್ಮಾರಕ ಆಸ್ಪತ್ರೆಯ ಹೃದಯ ತಜ್ಞ ಡಾ.ಜನಾರ್ದನ ಅವರು ಅಶ್ವತ್ಥ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಾಹಸಸಿಂಹ ವಿಷ್ಣುವರ್ಧನ್ ಅವರು ನಿಧನರಾದಾಗ ಅಶ್ವತ್ಥ್ ಅವರು ಮಾನಸಿಕವಾಗಿ ಬಹಳಷ್ಟು ನೊಂದುಕೊಂಡಿದ್ದರು. ಇದೇ ಯೋಚನೆಯಲ್ಲಿ ಆ ಹಿರಿಯ ಜೀವ ಮಂಕಾಗಿ ಹೋಗಿದ್ದರು.
ಈ ನಡುವೆ ಅಶ್ವತ್ಥ್ ಅವರ ಚಿಕಿತ್ಸೆಯ ವೆಚ್ಚವನ್ನು ಭರಿಸಲು ರಾಜ್ಯ ಸರಕಾರ ಮುಂದೆ ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ರು.1 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಜಯಮಾಲಾ ಹಾರೈಸಿದ್ದಾರೆ.
ಇತ್ತೀಚೆಗಷ್ಟೆ ಅಶ್ವತ್ಥ್ ಅವರು ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಬಂದಿದ್ದರು. ವೀಲ್ ಚೇರ್ ನಲ್ಲಿ ಕುಳಿತು ಕಾಶಿ, ಅಲ್ಲಿನ ಗಂಗಾ ಘಾಟ್ ಗಳನ್ನು ನೋಡಿ ಅಶ್ವತ್ಥ್ ಆನಂದಿಸಿದ್ದರು. ಕಾಶಿಯಿಂದ ಹಿಂತಿರುಗಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು ಎನ್ನುತ್ತಾರೆ ಅಶ್ವಥ್ ಅವರ ಸೊಸೆ ಸುಧಾ.