Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಸಂಘಕ್ಕೆ ಜಾಡಿಸಿದ ರಾಜ್ ಕುಟುಂಬ
ಕನ್ನಡ ಚಿತ್ರರಂಗದಲ್ಲಿ ದರ್ಶನ್ ಬಗ್ಗೆ ಇಷ್ಟೆಲ್ಲಾ ಹಾದಿಬೀದಿ ರಂಪವಾಗುತ್ತಿದ್ದರೂ ಡಾ.ರಾಜ್ ಕುಟುಂಬ ವರ್ಗ ಎಲ್ಲಿ? ಅವರು ಯಾಕೆ ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಲಿಲ್ಲ ಎಂಬುದು ಹಲವರ ಪ್ರಶ್ನೆಯಾಗಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಹಾಗೂ ಪುನೀತ್ ರಾಜ್ ಕುಮಾರ್ ಒಟ್ಟಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರಿನಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡುತ್ತಾ, ನಿಖಿತಾ ವಿರುದ್ಧದ ಕ್ರಮ ಸರಿಯಲ್ಲ. ಹಿರಿಯ ಕಲಾವಿದರೊಂದಿಗೆ ಚರ್ಚಿಸಿ ಚಲನಚಿತ್ರ ನಿರ್ಮಾಪಕರ ಸಂಘ ಈ ನಿರ್ಧಾರಕ್ಕೆ ಬರಬೇಕಾಗಿತ್ತು. ಆತುರಗೇಡಿ ನಿರ್ಧಾರಕ್ಕೆ ಬರಬಾರದಾಗಿತ್ತು. ನಿಖಿತಾ ವಿರುದ್ಧ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು ಬೇಜಾಬ್ದಾರಿ ಕ್ರಮ ಎಂದು ಶಿವಣ್ಣ ಖಂಡಿಸಿದ್ದಾರೆ.
ಕಲಾವಿದರ ಮೇಲೆ ನಿಷೇಧ ಹೇರುವುದು ಬೇಜಾಬ್ದಾರಿ ವರ್ತನೆ. ಕೂಡಲೆ ನಿಖಿತಾ ಮೇಲಿನ ನಿಷೇಧವನ್ನು ಹಿಂಪಡೆಯಬೇಕು. ಹಾಗೆಯೇ ಯಾರದೇ ಖಾಸಗಿ ವಿಚಾರಗಳಲ್ಲಿ ಮೂಗು ತೂರಿಸುವುದನ್ನೂ ಬಿಡಬೇಕು. ನಮ್ಮ ಚಿತ್ರೋದ್ಯಮವನ್ನು ನೋಡಿ ಬೇರೆಯವರು ನಗುವಂತಾಗಬಾರದು ಎಂದು ರಾಘವೇಂದ್ರ ರಾಜ್ ಕುಮಾರ್ ನಿರ್ಮಾಪಕರ ಸಂಘಕ್ಕೆ ಜಾಡಿಸಿದ್ದಾರೆ.