Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್, ಕಟ್ ಹೇಳಲಿದ್ದಾರೆ ಗೀತ ಸಾಹಿತಿ ಕೆ ಕಲ್ಯಾಣ್
ಕನ್ನಡ ಚಿತ್ರಗೀತೆಗಳ ಮೂಲಕ ಹೊಸ ಪುಳಕ ಉಂಟು ಮಾಡಿದ ಗೀತ ಸಾಹಿತಿ ಕೆ ಕಲ್ಯಾಣ್. ಅವರ ಸ್ವಚ್ಛ, ಸುಂದರ, ಸುಮಧುರ ಗೀತೆಗಳು ಕಲಾರಸಿಕರ ಮನತಣಿಸಿವೆ. "ಈ ಸುಂದರ ಬೆಳದಿಂಗಳ.. ಈ ತಂಪಿನ ಅಂಗಳದಲ್ಲಿ..." ಎಂದು ಬರೆದಕಲ್ಯಾಣ್ ಈಗ ರಮೇಶ್ ಅರವಿಂದ್ ಅವರಿಗೆ ಆಕ್ಷನ್, ಕಟ್ ಹೇಳಲು ಹೊರಟಿದ್ದಾರೆ. ಸದ್ಯಕ್ಕೆ ಚಿತ್ರಕತೆ, ಕತೆ ಹೆಣೆಯುವಲ್ಲಿ ಕಲ್ಯಾಣ್ ಮಗ್ನರಾಗಿದ್ದಾರೆ.
"ಚಿತ್ರ ಆರಂಭವಾಗಲು ಇನ್ನೂ ಸ್ವಲ್ಪ ಸಮಯ ಹಿಡಿಸುತ್ತದೆ. ಮೊದಲು ಚಿತ್ರಕತೆ ಸಿದ್ಧವಾಗಬೇಕು. ಚೊಚ್ಚಲ ಚಿತ್ರವಾದ ಕಾರಣ ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ.ಸಂಗೀತ ನಿರ್ದೇಶಕನಾಗಿ ಈಗಾಗಲೆ ಯಶಸ್ಸು ಕಂಡಿದ್ದೇನೆ. ಚಿತ್ರನಿರ್ದೇಶನದಲ್ಲೂ ಗೆಲ್ಲಬೇಕೆಂಬ ಆಸೆ ಇದೆ " ಎಂದಿದ್ದಾರೆ ಕಲ್ಯಾಣ್.
"ಕಲ್ಯಾಣ್ ಅವರ ಶಕ್ತಿ ಸಾಮರ್ಥ್ಯಗಳ ಬಗ್ಗೆ ನನಗೆ ನಂಬಿಕೆ ಇದೆ. ಚಿತ್ರ ನಿರ್ದೇಶನದಲ್ಲೂ ಅವರು ಗೆದ್ದೇ ಗೆಲ್ಲುತ್ತಾರೆ" ಎಂಬ ವಿಶ್ವಾಸವನ್ನು ರಮೇಶ್ ಅರವಿಂದ್ ವ್ಯಕ್ತಪಡಿಸಿದ್ದಾರೆ. ಕಲ್ಯಾಣ್ ನಿರ್ದೇಶನ ಎಂದ ಮೇಲೆ ಕತೆ, ಚಿತ್ರಕತೆ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ರಮೇಶ್ ಕೂಡಲೆ ಒಪ್ಪಿ ಚಿತ್ರಕ್ಕೆ ಸಹಿಹಾಕಿದ್ದಾರಂತೆ.