Don't Miss!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್, ಕಟ್ ಹೇಳಲಿದ್ದಾರೆ ಗೀತ ಸಾಹಿತಿ ಕೆ ಕಲ್ಯಾಣ್
ಕನ್ನಡ ಚಿತ್ರಗೀತೆಗಳ ಮೂಲಕ ಹೊಸ ಪುಳಕ ಉಂಟು ಮಾಡಿದ ಗೀತ ಸಾಹಿತಿ ಕೆ ಕಲ್ಯಾಣ್. ಅವರ ಸ್ವಚ್ಛ, ಸುಂದರ, ಸುಮಧುರ ಗೀತೆಗಳು ಕಲಾರಸಿಕರ ಮನತಣಿಸಿವೆ. "ಈ ಸುಂದರ ಬೆಳದಿಂಗಳ.. ಈ ತಂಪಿನ ಅಂಗಳದಲ್ಲಿ..." ಎಂದು ಬರೆದಕಲ್ಯಾಣ್ ಈಗ ರಮೇಶ್ ಅರವಿಂದ್ ಅವರಿಗೆ ಆಕ್ಷನ್, ಕಟ್ ಹೇಳಲು ಹೊರಟಿದ್ದಾರೆ. ಸದ್ಯಕ್ಕೆ ಚಿತ್ರಕತೆ, ಕತೆ ಹೆಣೆಯುವಲ್ಲಿ ಕಲ್ಯಾಣ್ ಮಗ್ನರಾಗಿದ್ದಾರೆ.
"ಚಿತ್ರ ಆರಂಭವಾಗಲು ಇನ್ನೂ ಸ್ವಲ್ಪ ಸಮಯ ಹಿಡಿಸುತ್ತದೆ. ಮೊದಲು ಚಿತ್ರಕತೆ ಸಿದ್ಧವಾಗಬೇಕು. ಚೊಚ್ಚಲ ಚಿತ್ರವಾದ ಕಾರಣ ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ.ಸಂಗೀತ ನಿರ್ದೇಶಕನಾಗಿ ಈಗಾಗಲೆ ಯಶಸ್ಸು ಕಂಡಿದ್ದೇನೆ. ಚಿತ್ರನಿರ್ದೇಶನದಲ್ಲೂ ಗೆಲ್ಲಬೇಕೆಂಬ ಆಸೆ ಇದೆ " ಎಂದಿದ್ದಾರೆ ಕಲ್ಯಾಣ್.
"ಕಲ್ಯಾಣ್ ಅವರ ಶಕ್ತಿ ಸಾಮರ್ಥ್ಯಗಳ ಬಗ್ಗೆ ನನಗೆ ನಂಬಿಕೆ ಇದೆ. ಚಿತ್ರ ನಿರ್ದೇಶನದಲ್ಲೂ ಅವರು ಗೆದ್ದೇ ಗೆಲ್ಲುತ್ತಾರೆ" ಎಂಬ ವಿಶ್ವಾಸವನ್ನು ರಮೇಶ್ ಅರವಿಂದ್ ವ್ಯಕ್ತಪಡಿಸಿದ್ದಾರೆ. ಕಲ್ಯಾಣ್ ನಿರ್ದೇಶನ ಎಂದ ಮೇಲೆ ಕತೆ, ಚಿತ್ರಕತೆ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ರಮೇಶ್ ಕೂಡಲೆ ಒಪ್ಪಿ ಚಿತ್ರಕ್ಕೆ ಸಹಿಹಾಕಿದ್ದಾರಂತೆ.