Don't Miss!
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯಾರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ನಾಗಶೇಖರ್
'ಸಂಜು ವೆಡ್ಸ್ ಗೀತಾ' ಚಿತ್ರದಿಂದ ನಟಿ ರಮ್ಯಾ ಅವರನ್ನು ಕೈಬಿಡಲಾಗಿದೆ ಎಂಬ ಸುದ್ದಿಯನ್ನು ನಟ, ನಿರ್ದೇಶಕ ನಾಗಶೇಖರ್ ಅಲ್ಲಗಳೆದಿದ್ದಾರೆ. ನಾಯಕ ನಟ ಶ್ರೀನಗರ ಕಿಟ್ಟಿಯೊಂದಿಗೆ ಈ ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ನಟಿಸಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗೀತಾ ಪಾತ್ರಕ್ಕಾಗಿ ರಮ್ಯಾಗಿಂತಲೂ ಉತ್ತಮ ನಟಿ ಮತ್ತೊಬ್ಬರಿಲ್ಲ ಎಂಬುದು ನಾಗಶೇಖರ್ ಕೊಡುವ ವಿವರಣೆ. ಹಾಗೆಯೇ ರಮ್ಯಾ ಸಹಾ ಗೀತಾ ಪಾತ್ರದಲ್ಲಿ ಕಾಣಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ರಮ್ಯಾ ಪದೇ ಪದೇ ವಿವಾದಗಳಲ್ಲಿ ಸಿಲುಕುತ್ತಿರುವ ಕಾರಣ ನಾಗಶೇಖರ್ ತಮ್ಮ ಚಿತ್ರದಿಂದ ಅವರನ್ನು ಕೈಬಿಡಲಾಗಿದೆ ಎಂಬ ವದಂತಿಗಳು ಗಾಂಧಿನಗರದಲ್ಲಿ ಹಬ್ಬಿದ್ದವು.
ಈ ರೀತಿಯ ವದಂತಿಗಳನ್ನು ನಾಗಶೇಖರ್ ತೀವ್ರವಾಗಿ ಖಂಡಿಸಿದ್ದು ರಮ್ಯಾರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ''ಈ ಪಾತ್ರಕ್ಕೆ ರಮ್ಯಾ ಮಾತ್ರ ನ್ಯಾಯ ಒದಗಿಸಬಲ್ಲರು. ರಮ್ಯಾರನ್ನು ಗಮನದಲ್ಲಿಟ್ಟುಕೊಂಡೆ ಚಿತ್ರಕತೆಯನ್ನು ಹೆಣೆದಿದ್ದೇನೆ. ನಮ್ಮನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಾಲದಕ್ಕೆ ನನ್ನ ಚಿತ್ರದಲ್ಲಿನಟಿಸಲು ರಮ್ಯಾ ಅವರಿಗೂ ಇಷ್ಟ. ಇದಿಷ್ಟು ಸಾಕಲ್ಲವೆ ನಾವಿಬ್ಬರೂ ಒಟ್ಟಿಗೆ ಚಿತ್ರ ಮಾಡಲು'' ಎಂದು ನಾಗಶೇಖರ್ ವಿವರಣೆ ನೀಡಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)