Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಂಎಫ್ ಪ್ರಚಾರ ರಾಯಭಾರಿ ಪುನೀತ್
ನಟ ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ಹಾಲು ಮಹಾಮಂಡಲಿ (ಕೆಎಂಎಫ್)ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಲಿದ್ದಾರೆ. ಆಶ್ಚರ್ಯಕರ ಸಂಗತಿ ಎಂದರೆ ಪುನೀತ್ ಅವರು ಯಾವುದೇ ಸಂಭಾವನೆ ಪಡೆಯದೆ ಉಚಿತವಾಗಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಈ ಬಗ್ಗೆ ವಿವರ ನೀಡಿರುವ ಕೆಎಂಎಫ್ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ, ಮಹಾಮಂಡಲದ ಹಾಲು ಉತ್ಪನ್ನಗಳ ಮಾರಾಟ ಮತ್ತು ವಿಸ್ತರಣೆಗಾಗಿ ಪುನೀತ್ ಅವರ ಸೇವೆಯನ್ನು ಬಳಸಿಕೊಳ್ಳಲಿದ್ದೇವೆ. 'ಸ್ವಾಭಿಮಾನಿ ಕನ್ನಡಿಗರ ಹಾಲು' ಎಂಬ ಘೋಷ ವಾಕ್ಯವನ್ನು ಉತ್ಪನ್ನಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದರು.
ಮೊದಲಿಂದಲೂ ತಾವು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಕೆಎಂಎಫ್ ಉತ್ಪನ್ನಗಳ ಪ್ರಚಾರಕ್ಕಾಗಿ ಅವರ ಕುಟುಂಬದವರನ್ನು ಬಳಸಿಕೊಳ್ಳಬೇಕು ಎಂಬ ಆಲೋಚನೆ ಇತ್ತು. ಶಿವರಾಜ್ ಕುಮಾರ್ ಅವರ ಹೆಸರು ಪರಿಗಣನೆಗೆ ಬಂದಿತ್ತು, ಅಂತಿಮವಾಗಿ ಪುನೀತ್ ಹೆಸರನ್ನು ಸೂಚಿಸಲಾಗಿದೆ ಎಂದು ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.
ಅವರು ಯಾವುದೇ ಸಂಭಾವನೆ ಪಡೆಯದೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜನಪ್ರಿಯ ನಟರೊಬ್ಬರನ್ನು ಕೆಎಂಎಫ್ ಪ್ರಚಾರ ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ರೆಡ್ಡಿ ಈ ಹಿಂದೆ ಮಾಹಿತಿ ನೀಡಿದ್ದರು. ಆದರೆ ನಟ ಯಾರು ಎಂಬುದನ್ನು ಗುಟ್ಟಾಗಿ ಇಟ್ಟಿದ್ದರು. ಇದೀಗ ಪುನೀತ್ ಅವರನ್ನು ಆಯ್ಕೆ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.
(ದಟ್ಸ್ ಕನ್ನ್ನಡ ಚಿತ್ರವಾರ್ತೆ)