Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಂಟನಿಗೆ ಜೊತೆಯಾದ ತುಂಟಿ ಸದಾ
ನಟಿ ಸದಾ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕನ್ನಡದ ಪ್ರೇಕ್ಷಕರು ಇನ್ನೇನು ಸದಾ ಅವರನ್ನು ಮರೆತೇ ಬಿಟ್ಟರು ಎಂದುಕೊಂಡಾಗ 'ಮೈಲಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ 99ನೇ ಚಿತ್ರ ಮೈಲಾರಿ.
'ಮೈಲಾರಿ' ಚಿತ್ರೀಕರಣ ಭರದಿಂದ ಸಾಗುತ್ತಿದೆ. ಏತನ್ಮಧ್ಯೆ ಸದಾ ಮತ್ತೊಂದು ಕನ್ನಡ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶಿಸಲಿರುವ 'ತುಂಟ ತುಂಟಿ' ಚಿತ್ರದ ಪಾತ್ರ ಸದಾ ಅವರಿಗೆ ಒಲಿದಿದೆ. ಸಮೀರ್ ದತ್ತಾನಿ ಅಲಿಯಾಸ್ ಧ್ಯಾನ್ ಚಿತ್ರದ ನಾಯಕ ನಟ.
'ತುಂಟ ತುಂಟಿ' ಚಿತ್ರದ ಮತ್ತೊಂದು ವಿಶೇಷವೆಂದರೆ, ಇಂದ್ರಜಿತ್ ಲಂಕೇಶ್ ಚಿತ್ರದಲ್ಲಿ ಧ್ಯಾನ್ ಮತ್ತು ಸದಾ ನಟಿಸುತ್ತಿರುವ ಎರಡನೇ ಚಿತ್ರ ಇದಾಗಿದೆ. ಈ ಹಿಂದೆ ಇದೇ ಜೋಡಿ 'ಮೋನಾಲಿಸಾ' ಚಿತ್ರದಲ್ಲಿ ಪಾರ್ಟ್ ಮಾಡಿದ್ದರು. 'ತುಂಟ ತುಂಟಿ' ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ರನ್ನು ಕರೆತರುವ ಪ್ರಯತ್ನವನ್ನು ಇಂದ್ರಜಿತ್ ಮಾಡಿದ್ದರು.
ಆದರೆ ಗಣೇಶ್ ಈ ಚಿತ್ರದ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸಲಿಲ್ಲ ಎನ್ನುತ್ತವೆ ಗಾಂಧಿನಗರದ ಮೂಲಗಳು. ಸಾಲದಕ್ಕೆ ಇಂದ್ರಜಿತ್ ಯಶಸ್ವಿ ನಿರ್ದೇಶಕ ಅಲ್ಲ ಎಂಬುದು ಗಣೇಶ್ ಗೂ ಗೊತ್ತಿರುವ ಸಂಗತಿ. ವಿಷಯ ಹೀಗಿದ್ದರೆ ತುಂಟ ತುಂಟಿಯನ್ನು ಗಣೇಶ್ ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂಬ ಮಾತುಗಳು ತೆರೆಯ ಹಿಂದೆ ಕೇಳಿಬಂದಿವೆ.