Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯಾಟ್ರಿಕ್ ಹೀರೋ ಶಿವಣ್ಣನಿಗೆ 'ಲಕ್ಷ್ಮಿ' ಕೃಪಾಕಟಾಕ್ಷ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈಗ ಬಿಜಿಯೋ ಬಿಜಿ. ಅವರ ಸಾಕಷ್ಟು ಚಿತ್ರಗಳು ಚಿತ್ರೀಕರಣ ಹಂತದಲ್ಲಿವೆ. ಅವುಗಳಲ್ಲಿ ಮುಖ್ಯವಾಗಿ ರಾಘವ ಲೋಕಿ ನಿರ್ದೇಶನದ 'ಲಕ್ಷ್ಮಿ' ಚಿತ್ರವೂ ಒಂದು. ಫೆ.10ರಿಂದ ಅಂತಿಮ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಮಾರ್ಚ್ ಮೊದಲ ವಾರದಲ್ಲಿ ಪೂರ್ಣವಾಗಲಿದೆ.
ಏತನ್ಮಧ್ಯೆ ಶಿವಣ್ಣ ಶಬರಿಮಲೆಗೆ ಹೊರಟಿದ್ದಾರೆ. ಫೆ.20ಕ್ಕೆ ಅವರು ಚಿತ್ರೀಕರಣಕ್ಕೆ ಹಿಂತಿರುಗಲಿದ್ದಾರೆ. ಇತ್ತೀಚೆಗೆ ಭಾರಿ ಸಾಹಸ ಸನ್ನಿವೇಶವೊಂದನ್ನು ಚಿತ್ರೀಕರಿಸಿಕೊಳ್ಳಲಾಯಿತು. ಶಿವಣ್ಣ ಸೇರಿದಂತೆ ಪ್ರಿಯಾಮಣಿ, ಆಶಿಷ್ ವಿದ್ಯಾರ್ಥಿ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಗೋವಾದಲ್ಲಿ ಹಾಡು ಹಾಗೂ ಕೆಲವು ಸನ್ನಿವೇಶಗಳನ್ನು ಚಿತ್ರೀಕರಿಸಿಕೊಳ್ಳಬೇಕಾಗಿದೆ. ಚಂದ್ರಶೇಖರ್ ಛಾಯಾಗ್ರಹಣ, ಗುರುಕಿರಣ್ ಸಂಗೀತ 'ಲಕ್ಷ್ಮಿ' ಚಿತ್ರಕ್ಕಿದೆ. ಅಂದಹಾಗೆ ಓಂ ಪ್ರಕಾಶ್ ರಾವ್ ನಿರ್ದೆಶನದಲ್ಲಿ ಮೂಡಿಬರುತ್ತಿರುವ ಶಿವಣ್ಣನ 101ನೇ 'ಶಿವ'. ಈ ಚಿತ್ರವೂ ಅಂತಿಮ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಇದಾದ ಬಳಿಕ 'ಅಂದರ್ ಬಾಹರ್'ಗೆ ಕೈಹಾಕಿದ್ದಾರೆ. (ಏಜೆನ್ಸೀಸ್)