Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ಗೆ ಅಣ್ಣನಾದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಣ್ಣನಾಗಿದ್ದಾರೆ. ಯಾರಿಗೆ ಅಂತೀರಾ? ಇನ್ಯಾರಿಗೆ ಕಿಚ್ಚ ಸುದೀಪ್ಗೆ. ಇವರಿಬ್ಬರೂ ಒಂದು ಕಾಲದಲ್ಲಿ ನಾನೊಂದು ತೀರೆ ನೀನೊಂದು ತೀರ ಎಂಬಂತಿದ್ದರು. ಆದರೆ ಇತ್ತೀಚೆಗೆ 'ಸಾರಥಿ' ಶತದಿನೋತ್ಸವ ಸಂಭ್ರಮದಲ್ಲಿ ಸುದೀಪ್ ಪಾಲ್ಗೊಂಡು ದರ್ಶನ್ಗೆ ಬೆನ್ನುತಟ್ಟಿದ್ದರು. ಈ ಮೂಲಕ ಇಬ್ಬರ ನಡುವಿನ ಅಡ್ಡಗೆರೆ ಅಳಿಸಿಹೋಗಿದೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ವೇಳೆ ಇಬ್ಬರೂ ಮತ್ತಷ್ಟು ಹತ್ತಿರವಾಗಿದ್ದರು. ಈಗ ಇವರಿಬ್ಬರನ್ನು ಇನ್ನಷ್ಟು ಹತ್ತಿರಕ್ಕೆ ತರುತ್ತಿದ್ದಾರೆ ಉದ್ಯಮಿ ಹಾಗೂ ಚಿತ್ರ ನಿರ್ಮಾಪಕ ಅಶೋಕ್ ಖೇಣಿ. ಇವರಿಬ್ಬರನ್ನು ಹಾಕಿಕೊಂಡು ಮಲ್ಟಿಸ್ಟಾರ್ ಸಿನಿಮಾ ಮಾಡುವುದಾಗಿ ಖೇಣಿ ಔಪಚಾರಿಕವಾಗಿ ಸೋಮವಾರ (ಫೆ.13) ಘೋಷಿಸಿದ್ದಾರೆ.
ಇದೊಂದು ಅಣ್ಣತಮ್ಮಂದಿರ ಕತೆಯಂತೆ. ಅಣ್ಣನದು ಹಳ್ಳಿಗಾಡಾದರೆ ತಮ್ಮ ಸಿಟಿಯವ. ಅಣ್ಣತಮ್ಮನ ಸೆಂಟಿಮೆಂಟೇ ಚಿತ್ರದ ಜೀವಾಳ. ಇದಿಷ್ಟರ ಬಗ್ಗೆ ಸುಳಿವು ನೀಡಿರುವ ಖೇಣಿ ಉಳಿದ ವಿವರಗಳನ್ನು ಇನ್ನಷ್ಟೇ ಪ್ರಕಟಿಸುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೂ ಕಾಯಬೇಕು. (ಒನ್ಇಂಡಿಯಾ ಕನ್ನಡ ವಿಶೇಷ)