Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ವಿರುದ್ಧ ಕೇಬಲಿಗರ ಬಂಡಾಯ
ಬೆಂಗಳೂರು: ಕನ್ನಡದ ಜನಪ್ರಿಯ ಚಾನಲ್ ಉದಯ ಟೀವಿ ಪೇ ಚಾನಲ್ ಆಗಿ ಬದಲಾಗಿರುವುದು ಕೇಬಲ್ ಆಪರೇಟರ್ಗಳ ಅಸಮಾಧಾನಕ್ಕೆ ಕಾರಣವಾಗಿದ್ದು , ಕರ್ನಾಟಕ ಕೇಬಲ್ ಆಪರೇಟರ್ಗಳ ಸಂಘ ಉದಯ ಟೀವಿಯ ವಿರುದ್ಧ ಆಗಸ್ಟ್ 16ರಂದು ಭಾರೀ ಪ್ರತಿಭಟನೆ ಹಮ್ಮಿಕೊಂಡಿದೆ.
ಆ.16ರ ಸೋಮವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರು ಚಲೋ ನಡೆಸಲು ಕೇಬಲ್ ಆಪರೇಟರ್ಗಳ ಸಂಘ ನಿರ್ಧರಿಸಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಸುಮಾರು 2000ಕ್ಕೂ ಹೆಚ್ಚು ಕೇಬಲ್ ಟಿವಿ ಅಪರೇಟರ್ಗಳಿದ್ದು ಅವರೆಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಸಂಘ ಕರೆ ನೀಡಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ಉದಯ ಟೀವಿ ಕಚೇರಿ ಎದುರು ಧರಣಿ ನಡೆಸಲಾಗುವುದು. ಪೇ ಚಾನಲ್ ನಿರ್ಧಾರದಿಂದ ಉದಯ ಹಿಂದೆ ಸರಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೇಬಲ್ ಆಪರೇಟರ್ಗಳು ಎಚ್ಚರಿಸಿದದಾರೆ.
ಸನ್ ಹಾಗೂ ಸೂರ್ಯ ಚಾನಲ್ಗಳು ಉಚಿತ ಚಾನಲ್ಗಳಾಗಿ ಮುಂದುವರಿದಿದ್ದರೂ, ಉದಯಟಿವಿಯನ್ನು ಮಾತ್ರ ಪೇ ಚಾನಲ್ ಆಗಿ ಪರಿವರ್ತಿಸುವ ಕ್ರಮ ಸರಿಯಾದುದಲ್ಲ ಎಂದು ಕೇಬಲ್ ಆಪರೇಟರ್ಗಳ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಬಲ್ ದುಬಾರಿ : ಸೇವಾ ತೆರಿಗೆ ಮತ್ತು ಶೈಕ್ಷಣಿಕ ಸೆಸ್ ಏರಿಕೆ ಹಿನ್ನೆಲೆಯಲ್ಲಿ ಕೇಬಲ್ ದರ ಏರಿಸಲು ಕೇಬಲ್ ಆಪರೇಟರ್ಗೆ ದೂರವಾಣಿ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿದೆ.(ಏಜನ್ಸೀಸ್)