Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಪ್ರಭಾವ : ಕಣ್ಣು ಕೊಡುವ ಕಣ್ಣಪ್ಪರ ಸಂಖ್ಯೆ ಹೆಚ್ಚಳ
ಬೆಂಗಳೂರು : ನಟ ರಾಜ್ಕುಮಾರ್ ಅವರ ಆದರ್ಶಗಳನ್ನು ಅಭಿಮಾನಿಗಳು ಪಾಲಿಸುತ್ತಿದ್ದಾರೆ. ಕಳೆದ 3 ತಿಂಗಳಲ್ಲಿ ನಾರಾಯಣ ನೇತ್ರಾಲಯದ ‘ರಾಜ್ ನೇತ್ರನಿಧಿ’ಯಲ್ಲಿ 1500ಕ್ಕೂ ಅಧಿಕ ಮಂದಿ ನೇತ್ರದಾನಕ್ಕೆ ಮುಂದೆ ಬಂದಿದ್ದಾರೆ.
ನೇತ್ರದಾನದ ಮಹತ್ವವನ್ನು ಜನರು ಈಗೀಗ ಅರಿಯುತ್ತಿದ್ದಾರೆ. ರಾಜ್ಕುಮಾರ್ರ ಮಾದರಿಯಲ್ಲಿ ಗಣ್ಯರು, ಸಾರ್ವಜನಿಕರು ನೇತ್ರದಾನಕ್ಕೆ ಆಸಕ್ತಿ ತೋರಿಸಿದ್ದಾರೆ. ಈ ಆಸಕ್ತಿ ಮತ್ತು ಜಾಗೃತಿ ಮತ್ತಷ್ಟು ಹೆಚ್ಚಿದಲ್ಲಿ, ರಾಜ್ಯದಲ್ಲಿರುವ ಒಂದು ಲಕ್ಷ ಅಂಧರು ಪ್ರಪಂಚ ನೋಡಬಲ್ಲರು.
ನಟಿ ಬಿ.ಸರೋಜಾದೇವಿ, ನಟ ದೊಡ್ಡಣ್ಣ, ಕ್ರಿಕೆಟ್ಪಟುಗಳಾದ ಅನಿಲ್ ಕುಂಬ್ಳೆ, ಬ್ರಿಜೇಶ್ ಪಟೇಲ್, ನೂತನ ಲೋಕಾಯುಕ್ತ ಸಂತೋಷ್ ಹೆಗಡೆ, ಶಾಸಕ ಬಿ.ಸಿ.ಪಾಟೀಲ್ ಮತ್ತಿತರರು ಕಣ್ಣು ನೀಡುವ ಪ್ರತಿಜ್ಞೆ ಸ್ವೀಕರಿಸಿದ್ದಾರೆ.
ನಂದಿನಿ ಹೋಟೆಲ್ ಸಮೂಹದ ಅಧ್ಯಕ್ಷ ಎನ್.ಆನಂದ್ ನೇತ್ರದಾನ ಮಾಡಿದವರಿಗೆ, ತಮ್ಮ ಹೋಟೆಲ್ನಲ್ಲಿ ಜೀವನಪೂರ್ತಿ ಶೇ.10ರಷ್ಟು ರಿಯಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್