Don't Miss!
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಪ್ರೀತಿ ಹಂಚಿದ ರಮ್ಯಾ
ನಗರದ ಪ್ರೇಮಿಗಳೆಲ್ಲ ಕೆಂಗುಲಾಬಿಗಳ ಪ್ರೇಮದ ಧ್ಯಾನದಲ್ಲಿ ಮುಳುಗಿರುವ ಸಂದರ್ಭದಲ್ಲಿ ನಟಿ ರಮ್ಯಾ ಹಾಗೂ ಗೀತರಚನೆಕಾರ ಕೆ.ಕಲ್ಯಾಣ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿದ್ದರು. ಅವರದ್ದು ಎದೆಯಿಂದ ಎದೆಗೆ ಪ್ರೇಮವನ್ನು ಹಂಚುವ ಕೆಲಸ.
ರಮ್ಯಾ ಮತ್ತು ಕಲ್ಯಾಣ್ ಪಾಲಿಗೆ ಪ್ರೇಮಿಗಳ ದಿನ ವಿಶಿಷ್ಟವಾಗಿ ಪರಿಣಮಿಸಿತ್ತು. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಸುಮಾರು 300 ರೋಗಿಗಳೊಂದಿಗೆ ಕೆಲವು ಸಮಯ ಕಳೆದ ಇಬ್ಬರು ಕಲಾವಿದರು, ನೊಂದ ಮನಸ್ಸುಗಳಿಗೆ ಸಾಂತ್ವನ ಹೇಳಿದರು. ಪುಟಾಣಿ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು- ಎಲ್ಲರೂ ಸಿನಿಮಾ ಮಂದಿಯ ಕಣ್ತುಂಬಿಕೊಂಡರು. ಮಾತನಾಡಿಸಿ ಪುಳಕಗೊಂಡರು. ರೋಗ ಉಲ್ಬಣಗೊಂಡು ಜೀವದ ಆಸೆ ಬಿಟ್ಟವರೂ ಗುಂಪಿನಲ್ಲಿದ್ದರು.
ಕಲ್ಯಾಣ್ ಜೊತೆಗೆ ಮಕ್ಕಳ ಪುಟ್ಟದೊಂದು ಬಳಗವೂ ಇತ್ತು. ಇವರು ಕ್ಯಾನ್ಸರ್ ರೋಗಿಗಳಿಗೆ ಶುಭಾಶಯ ಪತ್ರಗಳನ್ನು ನೀಡಿ ಶುಭ ಹಾರೈಸಿದರು. ತಳವರ್ಗದ ಮಕ್ಕಳು ರೂಪಿಸಿದ ಶುಭಾಶಯ ಪತ್ರಗಳವು! ಅಂದಹಾಗೆ, ಕಲ್ಯಾಣ್ ಮತ್ತು ರಮ್ಯ ಅವರನ್ನು ಕಿದ್ವಾಯಿ ಅಂಗಳಕ್ಕೆ ಕರೆತಂದಿದ್ದು ಯುವ ಬೆಂಗಳೂರು ಎನ್ನುವ ಸ್ವಯಂ ಸೇವಾ ಸಂಸ್ಥೆ. ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಯುವ ಬೆಂಗಳೂರು- ಪ್ರೇಮಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸಿನಿಮಾ ಮಂದಿಯನ್ನು ಕ್ಯಾನ್ಸರ್ ಆಸ್ಪತ್ರೆಗೆ ಕರೆತಂದಿತ್ತು.