Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು
ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ . ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ವಾರದಿಂದ ಜಾರಿಗೆ ಬರಬೇಕಿದ್ದ ಹೊಸ ವೇಳಾಪಟ್ಟಿ ಮುಂದಿನ ವಾರದಿಂದ ಜಾರಿಗೆ ಬರಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಅಧ್ಯಕ್ಷೆ ಡಾ.ಜಯಮಾಲಾ ಅವರು ತಿಳಿಸಿದರು.
ಚಿತ್ರ ಪ್ರದರ್ಶನ ಸಮಯವನ್ನು ಬದಲಾಯಿಸುವುದರಿಂದ ಕಾನೂನು ಸುವ್ಯವಸ್ಥೆಗೆ ತೊಡಕಾಗುತ್ತದೆ ಎಂದು ಶಂಕರ ಬಿದರಿ ಅವರು ವಾಣಿಜ್ಯ ಮಂಡಳಿಯ ಮನವಿಯನ್ನು ತಳ್ಳಿಹಾಕಿದ್ದರು. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸದೆ ಮಂಡಳಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು ಸರಿಯಲ್ಲ ಎಂದಿದ್ದರು. ಈಗ ಮಂಡಳಿಯ ಮನವಿಯನ್ನು ಪರಿಶೀಲಿಸಿ ಬದಲಾವಣೆಗೆ ಒಪ್ಪಿಗೆ ನೀಡಿದ್ದಾರೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರದೇ ಇರಲು ಈಗಿರುವ ವೇಳಾಪಟ್ಟಿಯು ಒಂದು ಕಾರಣ ಎಂಬುದು ಮಂಡಳಿಯ ಅಭಿಪ್ರಾಯ.
ಕರ್ನಾಟದಲ್ಲಿ ಚಿತ್ರಮಂದಿರಗಳ ಪ್ರದರ್ಶನ ವೇಳೆ ಮೇ 22ರಿಂದ ಬದಲಾಗಲಿದೆ. ಈಗಿನ 10.30, 1.30, 4.30 ಮತ್ತು 7.30ರ ಬದಲಾಗಿ 11.15, 2.30, 6.15 ಮತ್ತು ರಾತ್ರಿ 9 ಗಂಟೆಗೆ ಸಿನಿಮಾ ಪ್ರದರ್ಶನ ನಡೆಯಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಬಿಬಿಎಂಪಿ
ಚುನಾವಣಾ
ಕಣಕ್ಕೆ
ನಿರ್ಮಾಪಕ
ಸುರೇಶ್!
ಜಗ್ಗೇಶ್
ವಿರುದ್ಧ
ಬೆಂಗಳೂರಲ್ಲಿ
ಕರವೇ
ಪ್ರತಿಭಟನೆ
ಕಿರುತೆರೆ
ನಟಿ
ಅಭಿನಯಾ
ವೈವಾಹಿಕ
ಜೀವನಕ್ಕೆ!