Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು
ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ . ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ವಾರದಿಂದ ಜಾರಿಗೆ ಬರಬೇಕಿದ್ದ ಹೊಸ ವೇಳಾಪಟ್ಟಿ ಮುಂದಿನ ವಾರದಿಂದ ಜಾರಿಗೆ ಬರಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಅಧ್ಯಕ್ಷೆ ಡಾ.ಜಯಮಾಲಾ ಅವರು ತಿಳಿಸಿದರು.
ಚಿತ್ರ ಪ್ರದರ್ಶನ ಸಮಯವನ್ನು ಬದಲಾಯಿಸುವುದರಿಂದ ಕಾನೂನು ಸುವ್ಯವಸ್ಥೆಗೆ ತೊಡಕಾಗುತ್ತದೆ ಎಂದು ಶಂಕರ ಬಿದರಿ ಅವರು ವಾಣಿಜ್ಯ ಮಂಡಳಿಯ ಮನವಿಯನ್ನು ತಳ್ಳಿಹಾಕಿದ್ದರು. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸದೆ ಮಂಡಳಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು ಸರಿಯಲ್ಲ ಎಂದಿದ್ದರು. ಈಗ ಮಂಡಳಿಯ ಮನವಿಯನ್ನು ಪರಿಶೀಲಿಸಿ ಬದಲಾವಣೆಗೆ ಒಪ್ಪಿಗೆ ನೀಡಿದ್ದಾರೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರದೇ ಇರಲು ಈಗಿರುವ ವೇಳಾಪಟ್ಟಿಯು ಒಂದು ಕಾರಣ ಎಂಬುದು ಮಂಡಳಿಯ ಅಭಿಪ್ರಾಯ.
ಕರ್ನಾಟದಲ್ಲಿ ಚಿತ್ರಮಂದಿರಗಳ ಪ್ರದರ್ಶನ ವೇಳೆ ಮೇ 22ರಿಂದ ಬದಲಾಗಲಿದೆ. ಈಗಿನ 10.30, 1.30, 4.30 ಮತ್ತು 7.30ರ ಬದಲಾಗಿ 11.15, 2.30, 6.15 ಮತ್ತು ರಾತ್ರಿ 9 ಗಂಟೆಗೆ ಸಿನಿಮಾ ಪ್ರದರ್ಶನ ನಡೆಯಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಬಿಬಿಎಂಪಿ
ಚುನಾವಣಾ
ಕಣಕ್ಕೆ
ನಿರ್ಮಾಪಕ
ಸುರೇಶ್!
ಜಗ್ಗೇಶ್
ವಿರುದ್ಧ
ಬೆಂಗಳೂರಲ್ಲಿ
ಕರವೇ
ಪ್ರತಿಭಟನೆ
ಕಿರುತೆರೆ
ನಟಿ
ಅಭಿನಯಾ
ವೈವಾಹಿಕ
ಜೀವನಕ್ಕೆ!