Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಂ.1 ಪಟ್ಟಕ್ಕಾಗಿ ನಟಿ ರಮ್ಯಾ ಹಾರಾಟ,ಹೋರಾಟ!
ನಟಿ ರಮ್ಯಾ ಗೆ ಕನ್ನಡ ಚಿತ್ರರಂಗದಲ್ಲಿ ಕ್ರಮೇಣ ಬೇಡಿಕೆ ಕಡಿಮೆಯಾಗುತ್ತಿದೆ. ಆದರೆ ತಮಿಳು ಚಿತ್ರರಂಗದಲ್ಲಿ ಆಕೆ ನಟಿಸಿದ 'ವರುಣಂ ಆಯಿರಂ' ಚಿತ್ರ ಹಿಟ್ ಆಗಿದ್ದು ರಮ್ಯಾ ಬೇಡಿಕೆ ಹೆಚ್ಚಾಗಿದೆ. ಕನ್ನಡ ಚಿತ್ರರಂಗದಲ್ಲಿನ ತನ್ನ ನಂ.1 ಪಟ್ಟವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ರಮ್ಯಾ ಮತ್ತೆ ಸ್ಯಾಂಡಲ್ ವುಡ್ ನತ್ತ ಲಗ್ಗೆಯಾಕಿದ್ದಾರೆ.
ಈಗಾಗಲೇ ಆಕೆ ನಟಿಸಿರುವ 'ಜೊತೆಗಾರ' ಮತ್ತು 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್' ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಪ್ರಸ್ತುತ ತಮಿಳಿನ 'ಕಾದಲ್ ಟು ಕಲ್ಯಾಣಂ' ಚಿತ್ರದಲ್ಲಿ ಬ್ಯುಸಿಯಾಗಿರುವ ರಮ್ಯಾ 5 ಹೊಸ ಕನ್ನಡ ಚಿತ್ರಗಳಿಗೆ ಸಹಿ ಹಾಕಿದ್ದಾರೆ. 'ಮೊಗ್ಗಿನ ಮನಸು' ನಿರ್ದೇಶಕ ಶಶಾಂಕ್ ರ ಮುಂದಿನ ಚಿತ್ರದಲ್ಲಿ ರಮ್ಯಾ ಪ್ರಧಾನ ಪಾತ್ರ ಪೋಷಿಸಲಿದ್ದಾರೆ. ಆ ದಿನಗಳು ಖ್ಯಾತಿಯ ನಿರ್ದೇಶಕ ಚೈತನ್ಯ ಸಹ ತಮ್ಮ ಮುಂದಿನ ಚಿತ್ರಕ್ಕೆ ಚೇತನ್ ಮತ್ತು ರಮ್ಯಾರನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಇದಿಷ್ಟೇ ಅಲ್ಲದೆ ಭರತ್ ಮತ್ತು ಸುದೀಪ್ ರ ಚಿತ್ರಗಳು ರಮ್ಯಾ ಕೈಯಲ್ಲಿವೆ. ತಮಿಳಿನ ಚಿತ್ರವೊಂದನ್ನು ಗುರುದತ್ ಕನ್ನಡಕ್ಕೆ ರೀಮೇಕ್ ಮಾಡಲಿದ್ದು ಆ ಚಿತ್ರಕ್ಕೂ ರಮ್ಯಾನೇ ನಾಯಕಿಯಂತೆ. ಎಂ ಎಸ್ ಸತ್ಯು ಸಹ ತಮ್ಮ ಮುಂದಿನ ಚಿತ್ರಕ್ಕೆ ರಮ್ಯಾರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ. ಒಟ್ಟಿನಲ್ಲಿ 2009 ರಮ್ಯಾ ಪಾಲಿಗೆ ಬಿಡುವಿಲ್ಲದ ವರ್ಷ ಎನ್ನಬಹುದು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಮಂಡ್ಯ
ಲೋಕಸಭೆಯಿಂದ
ನಟಿ
ರಮ್ಯಾ
ಸ್ಪರ್ಧೆ?
ಕೋಮಲ್
ಜೊತೆಗಿನ
ಸಿನಿಮಾಕ್ಕೆ
ರಮ್ಯಾ
ನಕಾರ?
ತಮಿಳಿನಲ್ಲಿ
ರಮ್ಯಾ
ನಟನೆ
ನಿಷೇಧಕ್ಕೆ
ಆಗ್ರಹ
ರಮ್ಯಾ
ಮತ್ತು
ಬಾಬು
ನಡುವೆ
ಬ್ಯಾಂಗ್
ಬ್ಯಾಂಗ್!