Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಗಡಿ ರಸ್ತೆ ಪೊಲೀಸ್ ಠಾಣೆಯಾದ ಜೆಡಿಎಸ್ ಕಚೇರಿ
ರೇಸ್ ಕೋರ್ಸ್ ರಸ್ತೆಯಲ್ಲಿರುವ ಜಾತ್ಯತೀತ ಜನತಾದಳ (ಜೆಡಿಎಸ್) ಕಚೇರಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಾಗಿ ಪರಿವರ್ತನೆಯಾಗಿದೆ! ಮಾನ್ಯ ಎಚ್ ಡಿ ದೇವೇಗೌಡರು ಜೆಡಿಎಸ್ ಕಚೇರಿಯನ್ನು ಯಡಿಯೂರಪ್ಪ ಸರಕಾರಕ್ಕೆ ದತ್ತಿಯಾಗಿ ಕೊಟ್ಟುಬಿಟ್ಟರೆ? ಎಂಬ ಪ್ರಶ್ನೆ ಕ್ಷಣಕಾಲ ಜೆಡಿಎಸ್ ಕಾರ್ಯಕರ್ತರಿಗೆ ಕಾಡಿದ್ದುಂಟು.
ಸೋಮವಾರ(ಸೆ.14) ಬೆಳಗ್ಗೆ ಜೆಡಿಎಸ್ ಕಚೇರಿಗೆ ಬಂದವರು ಬೋರ್ಡು ನೋಡಿ ಕಕ್ಕಾಬಿಕ್ಕಿಯಾದರು. ಅಲ್ಲಿ ಮಾಗಡಿ ರಸ್ತೆ ಪೊಲೀಸ್ ಠಾಣೆ ಎಂಬ ಫಲಕ ರಾರಾಜಿಸುತ್ತಿತ್ತು. ವಿಷಯ ಇಷ್ಟೇ..ಅಲ್ಲಿ ಕಿಚ್ಚ ಸುದೀಪ್ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಕೆಂಪೇಗೌಡ' ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು.
ಒಂದು ಡಜನ್ ಗೂ ಅಧಿಕ ಪೊಲೀಸ್ ವೇಷಧಾರಿಗಳು ಅಲ್ಲಿದ್ದರು. ಗುಲ್ಬರ್ಗ ಮತ್ತು ಕಡೂರಿನಲ್ಲಿ ಉಪಚುನಾವಣೆ ಕಾರಣ ಪಕ್ಷದ ಕಾರ್ಯಕರ್ತರೆಲ್ಲಾ ಅಲ್ಲಿ ಬೀಡುಬಿಟ್ಟಿದ್ದರು. ಹಾಗಾಗಿ ಜೆಡಿಎಸ್ ಕಚೇರಿ ಖಾಲಿ ಖಾಲಿಯಾಗಿತ್ತು. ಕೆಂಪೇಗೌಡ ಚಿತ್ರೀಕರಣಕ್ಕಾಗಿ ಬಿಟ್ಟುಕೊಡಲಾಗಿತ್ತು.
ಈ ಹಿಂದೆಯೂ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಚಿತ್ರವೊಂದರ ಚಿತ್ರೀಕರಣಕ್ಕೆ ಜೆಡಿಎಸ್ ಕಚೇರಿಯನ್ನು ಉಚಿತವಾಗಿ ಬಿಟ್ಟುಕೊಟ್ಟಿದ್ದರಂತೆ. ಈಗ 'ಕೆಂಪೇಗೌಡ'ನಿಗಾಗಿ ದೇವೇಗೌಡರು ಕಚೇರಿಯನ್ನು ಬಿಟ್ಟುಕೊಟ್ಟಿದ್ದಾರೆ ಅಷ್ಟೆ.