Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಲ್ಲಿ ಕಿರಾತಕ ಎತ್ತಂಗಡಿ; ಪ್ರದೀಪ್ ಪ್ರತಿಭಟನೆ
ಶೀರ್ಷಿಕೆಯಿಂದಲೆ ಹೆಂಗೆಳೆಯರನ್ನು ಸೆಳೆಯುತ್ತಿರುವ ಚಿತ್ರ 'ಕೃಷ್ಣನ್ ಮ್ಯಾರೇಜ್ ಸ್ಟೋರಿ'. ಈ ಚಿತ್ರ ಶುಕ್ರವಾರ (ಜು.15) ರಾಜ್ಯದಾದ್ಯಂತ ತೆರೆಕಂಡಿದೆ. ಹಾಗೆಯೇ ಮೈಸೂರು ಸರಸ್ವತಿಪುರಂನ ಸರಸ್ವತಿ ಚಿತ್ರಮಂದಿರದಲ್ಲೂ ಬಿಡುಗಡೆಯಾಗಿದೆ. ಇದೇ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣುತ್ತಿದ್ದ 'ಕಿರಾತಕ' ಚಿತ್ರ ಎತ್ತಂಗಡಿಯಾಗಿದೆ.
ಈ ಸಂಬಂಧ 'ಕಿರಾತಕ' ಚಿತ್ರ ನಿರ್ದೇಶಕ ಪ್ರದೀಪ್ ಸರಸ್ವತಿ ಚಿತ್ರಮಂದಿರದ ಇಂದು ಮುಂದೆ ಪ್ರತಿಭಟಿಸಿದರು. ತಮ್ಮ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದರೂ ಎತ್ತಂಗಡಿ ಮಾಡಲಾಗಿದೆ. ತಮ್ಮ ಚಿತ್ರದ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
'ಕಿರಾತಕ' ಚಿತ್ರ ತಕ್ಕಮಟ್ಟಿಗೆ ಪ್ರಶಂಸೆ ಪಡೆದಿತ್ತು. ಚಿತ್ರದ ಪ್ರಮುಖ ಪಾತ್ರದಲ್ಲಿ ಯಶ್, ಓವಿಯಾ ಅಭಿನಯಿಸಿದ್ದರು. ಪ್ರದೀಪ್ ನಿರ್ದೇಶನದ ಈ ಚಿತ್ರ ತಮಿಳು ಚಿತ್ರವೊಂದರ ಮರುಸೃಷ್ಟಿ.ನೂತನ್ ಉಮೇಶ್ ಆಕ್ಷನ್ ಕಟ್ ಹೇಳಿರುವ 'ಕೃಷ್ಣನ್ ಮ್ಯಾರೇಜ್ ಸ್ಟೋರಿ'ಯಲ್ಲಿ ಅಜಯ್ ರಾವ್ ಹಾಗೂ ನಿಧಿ ಸುಬ್ಬಯ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)