Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರದುರ್ಗದಲ್ಲಿ ಕೃಷ್ಣನ ಲೀಲೆಗಳನ್ನು ತೆರೆದಿಟ್ಟ ಶಶಾಂಕ್
'ಕೃಷ್ಣನ್ ಲವ್ ಸ್ಟೋರಿ' ಚಿತ್ರ ಇದೇ ಶುಕ್ರವಾರ ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಚಿತ್ರ ನಿರ್ದೇಶಕ ಶಶಾಂಕ್ ತಮ್ಮ ಚಿತ್ರದ ಬಗ್ಗೆ ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿನ ತಾಜಾ ಕಥೆ ಪ್ರೇಕ್ಷಕರ ಮನಗೆಲ್ಲುತ್ತದೆ ಎಂದಿದ್ದಾರೆ. ಗೆಳೆಯನೊಬ್ಬನ ನೈಜ ಕತೆಯಿದು ಎನ್ನುತ್ತಾರೆ ಶಶಾಂಕ್.
ಚಿತ್ರದ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಚಿತ್ರದ ಶೇ.75ರಷ್ಟು ಕತೆ ನಿಜವಾಗಿ ನಡೆದದ್ದು. ಉಳಿದ ಭಾಗ ಸಿನಿಮಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧಪಡಿಸಿದ್ದೇವೆ ಎಂದರು. ಚಿತ್ರದುರ್ಗದವರೇ ಆದ ಶಶಾಂಕ್ ಈ ಚಿತ್ರವನ್ನು ತೆಗೆಯಲು ಬರೋಬ್ಬರಿ ಒಂದು ವರ್ಷ ಸಮಯ ತೆಗೆದುಕೊಂಡಿದ್ದಾರೆ.
'ಸಿಕ್ಸರ್' ಹಾಗೂ 'ಮೊಗ್ಗಿನ ಮನಸು' ಬಳಿಕ ಶಶಾಂಕ್ ನಿರ್ದೇಶನದಲ್ಲಿ ಬರುತ್ತಿರುವ ಮೂರನೇ ಚಿತ್ರವಿದು. ಮೊದಲ ಎರಡು ಚಿತ್ರಗಳಲ್ಲಿ ಸಾಮಾಜಿಕ ಸಂದೇಶವಿದ್ದರೆ 'ಕೃಷ್ಣನ್ ಲವ್ ಸ್ಟೋರಿ' ಸಂಪೂರ್ಣ ಹಾಸ್ಯ ಪ್ರಧಾನ ಚಿತ್ರ ಎಂದು ಶಶಾಂಕ್ ವಿವರ ನೀಡಿದರು.
'ಎಕ್ಸ್ ಕ್ಯೂಸ್ ಮಿ' ಸೇರಿದಂತೆ ಹತ್ತು ಚಿತ್ರಗಳಲ್ಲಿ ಅಭಿನಯಿಸಿರುವ ಚಿತ್ರದ ನಾಯಕ ನಟ ಅಜಯ್ ರಾವ್ ಸಹ 'ಕೃಷ್ಣನ್ ಲವ್ ಸ್ಟೋರಿ' ಬಗ್ಗೆ ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. 'ಮುಸ್ಸಂಜೆ ಮಾತು' ಖ್ಯಾತಿಯ ಸಂಗೀತ ನಿರ್ದೇಶಕ ಶ್ರಿಧರ್ ಸಂಭ್ರಮ್ ಮಾತನಾಡುತ್ತಾ, ಚಿತ್ರದ ಸಾಹಿತ್ಯ ವಿಭಿನ್ನ ಸಂಗೀತ ಸಂಯೋಜನೆಗೆ ಪ್ರೇರಣೆ ನೀಡಿತು. ಹಾಗಾಗಿ ಚಿತ್ರದಲ್ಲಿ ವಿವಿಧ ರೀತಿಯ ಸಂಗೀತ ವಾದ್ಯಗಳನ್ನು ಬಳಸಲಾಗಿದೆ ಎಂದರು.