Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಂಡೆದೆ'ಯಲ್ಲಿ ಮಾರಾಮಾರಿ ಹೊಡೆದಾಟ
ರಾಮು ಎಂಟರ್ಪ್ರೈಸಸ್ ಲಾಂಛನದಡಿಯಲ್ಲಿ ನಿರ್ಮಾಪಕ ರಾಮು ನಿರ್ಮಿಸುತ್ತಿರುವ ಮತ್ತೊಂದು ಅದ್ದೂರಿ ಚಿತ್ರ 'ಗಂಡೆದೆ'ಗಾಗಿ ಈಗ ನಗರದ ಸುತ್ತಮುತ್ತ ಭರದ ಚಿತ್ರೀಕರಣ ಸಾಗಿದೆ. ಚಿತ್ರಕ್ಕಾಗಿ ನಂದಿನಿ (ರಾಗಿಣಿ) ಮೇಲಿನ ಪ್ರೀತಿಗಾಗಿ ಕೃಷ್ಣ (ಚಿರಂಜೀವಿ ಸರ್ಜಾ) ಕಾಲೇಜಿನಲ್ಲಿ ಗೂಂಡಾಗಿರಿಗೆ ಹೆಸರಾಗಿದ್ದ ಉದಯ್ ಬೈಕನ್ನು ಒರೆಸುವುದು ಹಾಗೂ ನಂದಿನಿ ವಿಷಯದಲ್ಲಿ ಮಾತಿಗೆ ಮಾತು ಬೆಳೆದು ಕೃಷ್ಣ ಹಾಗೂ ಉದಯ್ ನಡುವೆ ಮಾರಾಮಾರಿ ಹೊಡೆದಾಟ ನಡೆಯುತ್ತದೆ.
ಇದೇ ರೀತಿಯ ಹಲವಾರು ಸನ್ನಿವೇಶಗಳನ್ನು ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನದೊಂದಿಗೆ ಮುಜೀರ್ ಛಾಯಾಗ್ರಹಣದಲ್ಲಿ ನಿರ್ದೇಶಕ ಅಕುಲ್ ಶಿವ ಚಿತ್ರಿಸಿಕೊಂಡರು.ಚಿತ್ರದ ಚಿತ್ರೀಕರಣವು ಒಂದೇ ಹಂತದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ನಿರ್ಮಾಪಕ ರಾಮು ತಿಳಿಸಿದ್ದಾರೆ.
ಚಿತ್ರಕ್ಕೆ ರಾಮ್ನಾರಾಯಣ್ ಸಂಭಾಷಣೆ, ಸಾಹಿತ್ಯ, ಚಕ್ರಿ ಸಂಗೀತ, ಮುಜೀರ್ ಛಾಯಾಗ್ರಹಣ, ಮುನಿರಾಜ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ, ಇಸ್ಮಾಯಿಲ್ ಕಲೆ, ಉಮೇಶ್ ನಿರ್ಮಾಣ ನಿರ್ವಹಣೆ ಇದ್ದು, ಚಿತ್ರವನ್ನು ಅಕುಲ್ಶಿವ ನಿರ್ದೇಶಿಸುತ್ತಿದ್ದಾರೆ.ತಾರಾಗಣದಲ್ಲಿ ಚಿರಂಜೀವಿ ಸರ್ಜಾ, ರಾಗಿಣಿ, ದೇವರಾಜ್, ರಮೇಶ್ ಭಟ್ ,ರಂಗಾಯಣರಘು, ಸಾಧುಕೋಕಿಲ, ಅರುಣಾ ಬಾಲ್ರಾಜ್, ಚಿತ್ರಾ ಶೆಣೈ, ಲಕ್ಷ್ಮಣ್, ಪವನ್, ಸಂಕೇತ್ ಕಾಶಿ ಮುಂತಾದವರಿದ್ದಾರೆ.