Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಮಾತೃಭೂಮಿಯಲ್ಲಿ ಪುನೀತ್ 'ಪೃಥ್ವಿ' ಕಂಪನ
ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಮಲಯಾಳಂನಲ್ಲಿ ಪ್ರಶಂಸೆಗೆ ಒಳಗಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಪೃಥ್ವಿ' ಚಿತ್ರ ಕೇರಳದಲ್ಲಿ ಹೊಸ ಕಂಪನಗಳನ್ನು ಎಬ್ಬಿಸಿದೆ. ಪ್ರಚಲಿತ ರಾಜಕೀಯ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಬಳ್ಳಾರಿ ರಾಜಕೀಯ ಹಾಗೂ ಅಕ್ರಮ ಗಣಿಗಾರಿಕೆ ಬಗ್ಗೆ ಹೆಣೆಯಲಾದ ಚಿತ್ರ ಇದಾಗಿದೆ.
ಕೇರಳದ "ಮಾತೃಭೂಮಿ" ದೈನಿಕ ಪತ್ರಿಕೆ ಪೃಥ್ವಿ ಚಿತ್ರದ ಬಗ್ಗೆ ಹತ್ತು ಪುಟಗಳಷ್ಟು ಸುದೀರ್ಘ ಲೇಖನವನ್ನು ಪ್ರಕಟಿಸಿದೆ. ತಮ್ಮದೇ ಸ್ವಂತ ನಿರ್ಮಾಣದ 'ಒರು ವಡಕ್ಕನ್ ವೀರಗಾಥ' ಚಿತ್ರದ ಬಗ್ಗೆ ಕೇವಲ ಮೂರು ಪುಟಗಳಷ್ಟು ಲೇಖನವನ್ನು ಬರೆದು ಅಚ್ಚರಿ ಮೂಡಿಸಿದೆ. ಕೇರಳದ ಹಲವು ನಿರ್ದೇಶಕರು 'ಪೃಥ್ವಿ 'ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.
ಚಿತ್ರ ನಿರ್ದೇಶಕ ಜಾಕಬ್ ವರ್ಗೀಸ್ ಅವರನ್ನು ಭೇಟಿ ಮಾಡುವ ಇಂಗಿತವನ್ನು ಕೇರಳ ನಿರ್ದೇಶಕರು ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಕನ್ನಡ ಚಿತ್ರವೊಂದಕ್ಕೆ ಈ ಮಟ್ಟದ ಪ್ರಶಂಸೆ ವ್ಯಕ್ತವಾಗುತ್ತಿರುವುದು ನಿಜಕ್ಕೂ ಮೆಚ್ಚತಕ್ಕ ಸಂಗತಿ. ವಿಧಾನಸೌಧದಲ್ಲಿ ಅಕ್ರಮ ಗಣಿಕಾರಿಕೆ ಬಗ್ಗೆ ಚರ್ಚೆ ಕಾವೇರುತ್ತಿರುವ ಹೊತ್ತಿನಲ್ಲೆ ಕಾಕತಾಳೀಯವೆಂಬಂತ್ಗೆ 'ಪೃಥ್ವಿ ' ಚಿತ್ರ ಪ್ರಶಂಸೆಗೆ ಒಳಗಾಗಿದೆ.