Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾ ಪಕ್ಷಕ್ಕೆ ಜೈ ಎಂದ ಸೂಪರ್ ಸ್ಟಾರ್ ರಜನಿಕಾಂತ್
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಯಾವ ರಾಜಕೀಯ ಪಕ್ಷ ಸೇರಲಿದ್ದಾರೆ ಎಂಬ ತೀವ್ರ ಕುತೂಹಲ ರಾಜಕೀಯ ವಲಯದಲ್ಲಿ ಮನೆಮಾಡಿದೆ. ಮೊನ್ನೆ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಇತ್ತು. ನೆನ್ನೆ ಜಯಲಲಿತಾ ಎಐಎಡಿಎಂಕೆ ಪಕ್ಷಕ್ಕೆ ಸೇರಲಿದ್ದಾರೆ ತೂರಿ ಬಂತು. ಈ ಸುದ್ದಿಯ ಸತ್ಯಾಸತ್ಯತೆಗಳು ಏನೋ ಎಂತೋ ಗೊತ್ತಿಲ್ಲ. ಆದರೆ ಅವರು ಭ್ರಷ್ಟಾಚಾರ, ಲಂಚಾವತಾರದ ವಿರುದ್ಧ ಸಮರ ಸಾರಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಸಾಮಾಜಿಕ ಪಕ್ಷ ಸೇರುವುದಾಗಿ ಸ್ಪಷ್ಟವಾಗಿ ತಿಳಿದ್ದಾರೆ.
ರಜನಿಕಾಂತ್ ಅವರು ಈ ಹಿಂದೆಯೇ ಸಾಮಾಜಿಕ ಸೇವೆಗೆ ಧುಮುಕಬೇಕಾಗಿತ್ತು. ಆದರೆ ಅವರ ಆರೋಗ್ಯ ಇದಕ್ಕೆ ಸಹಕರಿಸದ ಕಾರಣ ಅವರು ಸಾಮಾಜಿಕ ಸೇವೆಯಿಂದ ದೂರ ಇದ್ದರು. ಇಳಿ ವಯಸ್ಸಿನಲ್ಲೂ ಅಣ್ಣಾ ಹಜಾರೆ ಹರಯದಯುವಕನಂತೆ ಹೋರಾಟ ಮಾಡುತ್ತಿರುವುದು ರಜನಿ ಅವರನ್ನು ಸಾಮಾಜಿಕ ಸೇವೆಗೆ ಧುಮುಕಲು ಪ್ರೇರಣೆ ನೀಡಿದೆ.
ಈ ವಿವರಗಳನ್ನು ರಜನಿಕಾಂತ್ ಅವರು ಖಾಸಗಿ ಟಿವಿ ವಾಹಿನಿಯೊಂದಿಗೆ ಹಂಚಿಕೊಂಡಿದ್ದಾರೆ. ಜನ ಲೋಕಪಾಲ ಮಸೂದೆಯನ್ನು ಮಂಡಿಸಲು ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯವಿದೆ. ಹಾಗಾಗಿ ತಾವು ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ಹಠಾವೋ ಆಂದೋಲನಕ್ಕೆ ಧುಮುಕುತ್ತಿರುವುದಾಗಿ ರಜನಿ ತಿಳಿಸಿದ್ದಾರೆ.