Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ತಪ್ತ ಮನಸ್ಸಿನ ತಪಸ್ಸು 'ತಮಸ್ಸು'
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ತಮಸ್ಸು' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. 'ಆ ದಿನಗಳು', 'ಸ್ಲಂ ಬಾಲ', 'ಕಳ್ಳರ ಸಂತೆ' ರೀತಿಯ ನೈಜತೆಗೆ ಹತ್ತಿರವಾದ ಚಿತ್ರಗಳನ್ನು ಕೊಟ್ಟಂತಹ ಮೆಘಾ ಮೂವೀಸ್ ನಿರ್ಮಾಣದ ಮತ್ತೊಂದು ಚಿತ್ರ 'ತಮಸ್ಸು'.
ಶಿವಣ್ಣನಿಗೆ ಜೊತೆಯಾಗಿ ದಕ್ಷಿಣದ ಖ್ಯಾತ ತಾರೆ ಪದ್ಮಪ್ರಿಯಾ ಅಭಿನಯಿಸಿರುವ ಚಿತ್ರವಿದು. ಪತ್ರಕರ್ತ, ಸಂಭಾಷಣೆಕಾರ ಅಗ್ನಿ ಶ್ರೀಧರ್ ನಿರ್ದೇಶನದ ಚೊಚ್ಚಲ ಚಿತ್ರವೂ ಹೌದು. ತಮಸ್ಸು ಚಿತ್ರಮೇ ತಿಂಗಳಲ್ಲಿ ತೆರೆಗೆ ಅಪ್ಪಳಿಸುವುದು ಖಚಿತವಾಗಿದೆ. ಅಗ್ನಿ ಶ್ರೀಧರ್ ತಮ್ಮ ಮೊನಚಾದ ಲೇಖನಗಳಿಗೆ ಹೆಸರಾದವರು. ಈಗ ಅವರ ನಿರ್ದೇಶನದಲ್ಲಿ ಚಿತ್ರ ಹೇಗೆ ಬರುತ್ತದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ನೆಲೆಗೊಂಡಿದೆ.''ಕ್ರೌರ್ಯದ ಒಡಲಲ್ಲೂ ಅರಳುತ್ತವೆ ಮಾನವೀಯ ಸಂಬಂಧಗಳು'' ಎಂಬುದು ಚಿತ್ರದ ಒನ್ ಲೈನ್ ಕತೆ.
ಸಯದ್ ಅಮಾನ್ ಮತ್ತು ರವೀಂದ್ರ ನಿರ್ಮಾಣದ ಚಿತ್ರಕ್ಕೆ ಅಗ್ನಿ ಶ್ರೀಧರ್ ಕತೆ, ಚಿತ್ರಕತೆ ಹಾಗೂ ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಚಿತ್ರದಲ್ಲಿ ನಾಸಿರ್ ನಿರ್ಣಾಯಕ ಪಾತ್ರವನ್ನು ಪೋಷಿಸಿದ್ದಾರೆ. ಉಳಿದ ತಾರಾಬಳಗದಲ್ಲಿ ಹರ್ಷಿಕಾ ಪೂಣಚ್ಛ, ಆಸಿಫ್, ಸುಧಾ ಬೆಳವಾಡಿ, ಸತ್ಯ ಮುಂತಾದವರಿದ್ದಾರೆ. ಸುಂದರನಾಥ ಸುವರ್ಣ ಅವರ ಛಾಯಾಗ್ರಹಣ ಚಿತ್ರಕ್ಕಿದೆ.