Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ತಪ್ತ ಮನಸ್ಸಿನ ತಪಸ್ಸು 'ತಮಸ್ಸು'
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ತಮಸ್ಸು' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. 'ಆ ದಿನಗಳು', 'ಸ್ಲಂ ಬಾಲ', 'ಕಳ್ಳರ ಸಂತೆ' ರೀತಿಯ ನೈಜತೆಗೆ ಹತ್ತಿರವಾದ ಚಿತ್ರಗಳನ್ನು ಕೊಟ್ಟಂತಹ ಮೆಘಾ ಮೂವೀಸ್ ನಿರ್ಮಾಣದ ಮತ್ತೊಂದು ಚಿತ್ರ 'ತಮಸ್ಸು'.
ಶಿವಣ್ಣನಿಗೆ ಜೊತೆಯಾಗಿ ದಕ್ಷಿಣದ ಖ್ಯಾತ ತಾರೆ ಪದ್ಮಪ್ರಿಯಾ ಅಭಿನಯಿಸಿರುವ ಚಿತ್ರವಿದು. ಪತ್ರಕರ್ತ, ಸಂಭಾಷಣೆಕಾರ ಅಗ್ನಿ ಶ್ರೀಧರ್ ನಿರ್ದೇಶನದ ಚೊಚ್ಚಲ ಚಿತ್ರವೂ ಹೌದು. ತಮಸ್ಸು ಚಿತ್ರಮೇ ತಿಂಗಳಲ್ಲಿ ತೆರೆಗೆ ಅಪ್ಪಳಿಸುವುದು ಖಚಿತವಾಗಿದೆ. ಅಗ್ನಿ ಶ್ರೀಧರ್ ತಮ್ಮ ಮೊನಚಾದ ಲೇಖನಗಳಿಗೆ ಹೆಸರಾದವರು. ಈಗ ಅವರ ನಿರ್ದೇಶನದಲ್ಲಿ ಚಿತ್ರ ಹೇಗೆ ಬರುತ್ತದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ನೆಲೆಗೊಂಡಿದೆ.''ಕ್ರೌರ್ಯದ ಒಡಲಲ್ಲೂ ಅರಳುತ್ತವೆ ಮಾನವೀಯ ಸಂಬಂಧಗಳು'' ಎಂಬುದು ಚಿತ್ರದ ಒನ್ ಲೈನ್ ಕತೆ.
ಸಯದ್ ಅಮಾನ್ ಮತ್ತು ರವೀಂದ್ರ ನಿರ್ಮಾಣದ ಚಿತ್ರಕ್ಕೆ ಅಗ್ನಿ ಶ್ರೀಧರ್ ಕತೆ, ಚಿತ್ರಕತೆ ಹಾಗೂ ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಚಿತ್ರದಲ್ಲಿ ನಾಸಿರ್ ನಿರ್ಣಾಯಕ ಪಾತ್ರವನ್ನು ಪೋಷಿಸಿದ್ದಾರೆ. ಉಳಿದ ತಾರಾಬಳಗದಲ್ಲಿ ಹರ್ಷಿಕಾ ಪೂಣಚ್ಛ, ಆಸಿಫ್, ಸುಧಾ ಬೆಳವಾಡಿ, ಸತ್ಯ ಮುಂತಾದವರಿದ್ದಾರೆ. ಸುಂದರನಾಥ ಸುವರ್ಣ ಅವರ ಛಾಯಾಗ್ರಹಣ ಚಿತ್ರಕ್ಕಿದೆ.